ಜಿಲ್ಲೆಗಳು

ಕೊನೆಗೂ ಪ್ರಾರಂಭವಾದ ಕೆಆರ್‌ಎಸ್ ಬೃಂದಾವನ

ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು

ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ.

ಬೃಂದಾವನದ ಉತ್ತರ ಭಾಗದ ಚಿರತೆ ಸಂಚಾರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ವೈರಲ್ ಆಗುತ್ತಿರುವ ಸುರಕ್ಷತೆಯ ದೃಷ್ಟಿಯಿಂದ ಜಾರಿಗೊಳಿಸಲಾಗಿದೆ. ಅದಾಗಿ ಸುಮಾರು ೩೦ ದಿನ ಕಳೆಯುವಷ್ಟರಲ್ಲಿ ಅರಣ್ಯ ಇಲಾಖೆ ಹತ್ತಾರು ರೀತಿಯ ಪ್ರಯತ್ನ ನಡೆಸಿ ಚಿರತೆ ಸೆರೆ ಹಿಡಿಯಲು ಕಸರತ್ತು ನಡೆಸಿದರೂ ಫಲ ನೀಡಿಲ್ಲ.

8 ಬೋನುಗಳನ್ನು ಆಯಕಟ್ಟಿನ ಪ್ರದೇಶದಲ್ಲಿ ಇರಿಸಿದ್ದಲ್ಲದೆ, ಕಾಂಬಿಂಗ್ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಇಡೀ ಉತ್ತರ ಬೃಂದಾವನವನ್ನು ಜಾಲಾಡಿದರೂ ಚಿರತೆಯ ಸುಳಿವು ಆಗಲಿಲ್ಲ. ಇದೀಗ ಹುಲಿ ಟ್ಯಾಂಕ್ ಅನುಸರಿಸಿ ಹೆಚ್ಚಿನ ಸಿಬ್ಬಂದಿಯೊಂದಿಗೆ ಉತ್ತರ ಬೃಂದಾವನದಲ್ಲಿ ಚಿರತೆ ಸೆರೆಗೆ ಇಡೀ ಅರಣ್ಯ ಸಿಬ್ಬಂದಿ ಕಾರ್ಯೋನ್ಮುಖವಾಗಿದೆ.

ಈ ಬೃಂದಾವನ ಪ್ರವೇಶ ಶುಲ್ಕದಿಂದ ಬರುತ್ತಿದ್ದ ಆದಾಯ ಮತ್ತು ವ್ಯಾಪಾರ ವಹಿವಾಟಿನಿಂದ ಬದುಕು ಕಂಡುಕೊಂಡಿದ್ದ ವ್ಯಾಪಾರಿಗಳ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಂಡು 8 ಬೋನ್ಗಳನ್ನಿಟ್ಟು, ಬೃಂದಾವನದ ಗೇಟ್‌ಗಳಲ್ಲಿ ಅರಣ್ಯ ಇಲಾಖೆ ಮತ್ತು ಕೆಆರ್‌ಎಸ್‌ನ ಸಿಬ್ಬಂದಿಯನ್ನು ನಿಗದಿಪಡಿಸಲಾಗಿದೆ.

ಚಿರತೆ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಒಂದು ವಾರದ ಮಟ್ಟಿಗೆ ಗಾರ್ಡನ್ ಬಂದ್ ಮಾಡಿ ಜನರು, ಪ್ರವೇಶ ತಡೆದಿದ್ದರು. ಆದರೆ, ನಂತರದಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಂಡಿಲ್ಲ, ಮುಳ್ಳು ಹಂದಿ ಜತೆ ಹೋರಾಟ ನಡೆಸಿದ ದೃಶ್ಯಗಳು ಚಿರತೆ ಇಲ್ಲೇ ಎಲ್ಲೋ ಅಡಗಿದೆ ಎಂಬ ಆತಂಕಕ್ಕೆ ಕಾರಣವಾಗಿತ್ತು. ನಾರ್ತ್ ಬ್ಯಾಂಕ್ ಪ್ರದೇಶದ ನಿವಾಸಿಗಳು ಕತ್ತಲೆಯಾಗುತ್ತಲೇ ಮನೆ ಸೇರಿಕೊಳ್ಳುವ ಬೆಳವಣಿಗೆ ಕಂಡುಬಂತು. ಬೃಂದಾವನಕ್ಕೆ ಪ್ರವೇಶ ನಿಷೇಧಿಸಲಾಗಿದೆ ಪ್ರವಾಸಿ ಸ್ಥಳವನ್ನು ಜೀವನೋಪಾಯಕ್ಕಾಗಿ ನಂಬಿಕೊಆಡಿದ್ದ ವ್ಯಾಪಾರಸ್ಥರು ಕಣ್ಣೀರು ಹಾಕುತ್ತಾರೆ.

ಚಿರತೆ ಹಿಡಿಯಲಾಗದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರವೇಶ ಶುಲ್ಕದಿಂದ 90 ಲಕ್ಷ ನಷ್ಟ:

ಬೃಂದಾವನದ ಸೊಬಗನ್ನು ನೋಡಲು ದೇಶದ ವಿವಿಧೆಡೆಯಿಂದ ಬರುವ ಪ್ರವಾಸಿಗ ವಯಸ್ಕರಿಗೆ 50 ರೂ., ಮಕ್ಕಳಿಗೆ 10 ರೂ., ವಿದೇಶಿಯರಿಗೆ 200 ರೂ.ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ. ಇಲ್ಲದ ಪ್ರತಿ ದಿನ ಸುಮಾರು ೨.೫ ರಿಂದ ೩ ಲಕ್ಷ ರೂ. ಪ್ರವೇಶ ಶುಲ್ಕದಿಂದಲೇ ವಸೂಲಾಗುತ್ತಿತ್ತು. ಶನಿವಾರ ಭಾನುವಾರ ಸೇರಿದಂತೆ ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂದರ್ಭಗಳಲ್ಲಿ ಆಗಮಿಸುವುದು ವಾಡಿಕೆ, ೩೦ ದಿನಗಳಿಂದ ಆಗಿರುವ ನಷ್ಟವನ್ನು ಕಾಣಬಹುದು. ಇದಲ್ಲದೆ, ಪಾರ್ಕಿಂಗ್ ಶುಲ್ಕ, ಬೋಟಿಂಗ್, ಗಾರ್ಡನ್ ಒಳಗೆ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು, ಮೀನು ಹೋಟೆಲ್‌ಗಳು ಸೇರಿದಂತೆ ಎಲ್ಲ ಬಗೆಯ ಆರ್ಥಿಕ ಚಟುವಟಿಕೆಗಳೂ ಬಂದ್ ಆಗಿದ್ದರಿಅದು ಇನ್ನೂ ಹೆಚ್ಚಿನ ನಷ್ಟವಾಗಿದೆ ಎನ್ನುತ್ತಾರೆ ಕೆಆರ್‌ಎಸ್‌ನ ಇಐಐ ಫಾರೂಕ್ ಅಬು.

andolana

Recent Posts

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

23 mins ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

2 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

3 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

4 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

5 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

6 hours ago