ಜಿಲ್ಲೆಗಳು

‘ಶೌಚಾಲಯ, ತ್ಯಾಜ್ಯ ನಿರ್ವಹಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಿ’

ಮೈಸೂರು ವಿಭಾಗದ ಸ್ವಚ್ಛ ಭಾರತ್ ಮಿಷನ್ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ

ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಬಯಲು ಮಲ-ಮೂತ್ರ ವಿಸರ್ಜನೆ ತಪ್ಪಿಸುವ ಜತೆಗೆ ಘನತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರಾಮಸಭೆಗಳಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ), ಜಲಜೀವನ್ ಮಿಷನ್ ಯೋಜನೆಯ ಮೈಸೂರು ವಿಭಾಗ ಮಟ್ಟದ ಕಾರ್ಯಾಗಾರ ಹಾಗೂ ಪ್ರಗತಿಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಚ್ಛ ಭಾರತ್ ಅಭಿಯಾನ ಶುರುವಾದ ಮೇಲೆ ನಾಲ್ಕು ವರ್ಷಗಳಲ್ಲಿ ವಿವಿಧ ಹಂತದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸುಮಾರು ೪೫ ಲಕ್ಷ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ನಂತರದಲ್ಲಿ ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸಿ ಒಂದು ಲಕ್ಷ ಜನರಿಗೆ ಶೌಚಾಲಯ ನಿರ್ಮಿಸಿಕೊಡಲಾಗಿದೆ. ಈಗ ಜನಸಂಖ್ಯೆ ಹೆಚ್ಚಳ, ಕುಟುಂಬ ವಿಭಜನೆ, ಹೊಸ ಮನೆಗಳ ನಿರ್ಮಾಣ ಆಗುತ್ತಿರುವುದರಿಂದ ಮತ್ತೊಮ್ಮೆ ಸಮೀಕ್ಷೆ ಕಾರ್ಯ ನಡೆಸಿ ಶೌಚಾಲಯ ನಿರ್ಮಿಸಿಕೊಡಬೇಕು ಎಂದು ಹೇಳಿದರು.

೨೦೧೯ರ ಮೊದಲು ಶೌಚಾಲಯದ ಕಡೆಗೆ ಗಮನಹರಿಸಿದ್ದರಿಂದ ಈಗ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಿದೆ. ಈಗ ಕಸ ವಿಲೇವಾರಿ ಮಾಡುವುದು ದೊಡ್ಡ ಸವಾಲಾಗಿರುವ ಕಾರಣ ಅದನ್ನು ಎದುರಿಸಲು ಗ್ರಾಪಂ ಅಧ್ಯಕ್ಷರು, ಪಿಡಿಒಗಳಿಗೆ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಮಾರ್ಗದರ್ಶನ ನೀಡಬೇಕು. ಗ್ರಾಮಸಭೆಗಳಲ್ಲಿ ಕ್ರಿಯಾಯೋಜನೆಗಳನ್ನು ಮಂಡಿಸುವ ಮೊದಲು ಸ್ವಚ್ಛತೆಯ ವಿಚಾರವನ್ನು ಪ್ರಸ್ತಾಪಿಸಿ ವ್ಯಾಪಕ ಚರ್ಚೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹಲವಾರು ವರ್ಷಗಳಿಂದ ನಿರ್ಮಿಸಿರುವ ಗುಂಡಿಗಳು ವೈಜ್ಞಾನಿಕವಾಗಿ ಇಲ್ಲ. ಹೊಸದಾಗಿ ಕಟ್ಟುವ ಬಗ್ಗೆ ಇಲಾಖೆಯು ನೀಡಿರುವ ಮಾರ್ಗಗಳನ್ನು ಅನುಸರಿಸಬೇಕು. ಮಲದ ಗುಂಡಿ ತುಂಬಿದಾಗ ಅದನ್ನು ಖಾಲಿ ಮಾಡುವಾಗ ಅನುಸರಿಸಬೇಕಾದ ಕ್ರಮಗಳು ಮುಖ್ಯವಾಗಿದೆ. ಜೆಟ್ಟಿಂಗ್ ಮೆಷಿನ್, ಸಕ್ಕಿಂಗ್ ಮೆಷಿನ್‌ಗಳಲ್ಲಿ ಸೆಫ್ಟಿಕ್‌ಫಿಟ್‌ಗಳನ್ನು ಖಾಲಿ ಮಾಡಿದ ಮೇಲೆ ಅದನ್ನು ಇಂಗುವಂತೆ ಮಾಡಬೇಕು. ಆದರೆ, ಹಳ್ಳಿಗಳಲ್ಲಿ ಕೆರೆ, ನಾಲೆ ಮೊದಲಾದ ಕಡೆಗಳಲ್ಲಿ ಸುರಿದು ಬರಲಾಗುತ್ತಿದೆ. ಇದನ್ನು ಕೂಡಲೇ ತಪ್ಪಿಸಬೇಕು ಎಂದರು. ಹಳ್ಳಿಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಲು ಸಣ್ಣ ಘಟಕಗಳನ್ನು ತೆರೆಯಬೇಕು. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಪಂಗೆ ಹೆಚ್ಚಿನ ಅವಕಾಶ ನೀಡಿರುವುದರಿಂದ ಸಮುದಾಯದ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಕೆ.ಎಂ.ಗಾಯತ್ರಿ, ಉಪ ಕಾರ್ಯದರ್ಶಿಗಳು, ತಾಪಂ ಇಒಗಳು ಉಪಸ್ಥಿತರಿದ್ದರು.


ಒಂದು ಹಳ್ಳಿಯಲ್ಲಿ ಎಷ್ಟು ಶೌಚಾಲಯವಿದೆ, ಮನೆ ಮನೆಯಿಂದ ಕಸ ಸಂಗ್ರಹಿಸಲಾಗುತ್ತಿದೆಯೇ? ಬಯಲು ಮಲವಿಸರ್ಜನೆ ಇದೆಯೇ? ಸ್ವಚ್ಛತೆಗೆ ಕೊಟ್ಟಿರುವ ವಾಹನ ಬಳಕೆ ಆಗುತ್ತಿದೆಯೇ ಅಥವಾ ತುಕ್ಕು ಹಿಡಿಯುತ್ತಿದೆಯೇ ಎಂಬುದರ ಮಾಹಿತಿ ಗೊತ್ತಿರುತ್ತದೆ. ಸ್ವಂತ ಶೌಚಾಲಯ ಇದ್ದರೂ ಬಳಸದೆ ಬಯಲಿಗೆ ಹೋಗುವವರ ನಡವಳಿಕೆಯನ್ನು ಬದಲಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಗ್ರಾಪಂ ಸಭೆಗಳಲ್ಲಿ ವಿಸ್ತೃತ ಚರ್ಚೆಯಾಗುವಂತೆ ನೋಡಿಕೊಳ್ಳುವುದು ಅನಿವಾರ್ಯ.

ಎಲ್.ಕೆ.ಅತೀಕ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ ಅಪರ ಮುಖ್ಯಕಾರ್ಯದರ್ಶಿ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago