ಜಿಲ್ಲೆಗಳು

ಮಹದೇಶ್ವರ ಬೆಟ್ಟ ಲಾಡು ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದದ್ದರಿಂದ ನಷ್ಟವಾದ ಹಣವೆಷ್ಟು?

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್‌ ಖಾಲಿಯಾದ ಕಾರಣ ಸಿಬ್ಬಂದಿಯೊಬ್ಬರು ಅದನ್ನು ಬದಲಿಸಲು ಹೋದಾಗ ಈ ಅವಘಡ ಸಂಭವಿಸಿದೆ.

ಲಾಡು ತಯಾರಿಕಾ ಘಟಕವಾದ ಕಾರಣ ಎಣ್ಣೆ ಹಾಗೂ ಜಿಡ್ಡಿನ ಅಂಶ ಮತ್ತು ಎಣ್ಣೆ ಪದಾರ್ಥಗಳೇ ಹೆಚ್ಚಿದ್ದ ಕಾರಣ ಬೆಂಕಿ ಬಹುಬೇಗನೆ ಎಲ್ಲೆಡೆ ಹಬ್ಬಿದೆ. ಹೀಗಾಗಿ ಘಟಕದಲ್ಲಿದ್ದ ಎಲ್ಲರೂ ಆಚೆ ಓಡಿ ಬಂದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಬರೋಬ್ಬರಿ 10.26 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಘಟಕದಲ್ಲಿ ಇರಿಸಲಾಗಿದ್ದ 9 ಕ್ವಿಂಟಾಲ್‌ ಸಕ್ಕರೆ, 96 ಕೆಜಿ ಕಡ್ಲೆ ಹಿಟ್ಟು, 40 ಕೆಜಿ ನಂದಿನಿತುಪ್ಪ, 30 ಕೆಜಿ ದ್ರಾಕ್ಷಿ ಹಾಗೂ 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿದೆ. ಇನ್ನು ಈ ಅವಘಡದಿಂದ ಲಾಡು ಕೊರತೆ ಉಂಟಾಗಿದ್ದು ಮಹದೇಶ್ವರ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಲಾಡು ಮಾರಾಟ ನಿಲ್ಲಿಸಲಾಗಿದೆ.

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

6 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

6 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

6 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

6 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago