ಜಿಲ್ಲೆಗಳು

ಮಹದೇಶ್ವರ ಬೆಟ್ಟ ಲಾಡು ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದದ್ದರಿಂದ ನಷ್ಟವಾದ ಹಣವೆಷ್ಟು?

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್‌ ಖಾಲಿಯಾದ ಕಾರಣ ಸಿಬ್ಬಂದಿಯೊಬ್ಬರು ಅದನ್ನು ಬದಲಿಸಲು ಹೋದಾಗ ಈ ಅವಘಡ ಸಂಭವಿಸಿದೆ.

ಲಾಡು ತಯಾರಿಕಾ ಘಟಕವಾದ ಕಾರಣ ಎಣ್ಣೆ ಹಾಗೂ ಜಿಡ್ಡಿನ ಅಂಶ ಮತ್ತು ಎಣ್ಣೆ ಪದಾರ್ಥಗಳೇ ಹೆಚ್ಚಿದ್ದ ಕಾರಣ ಬೆಂಕಿ ಬಹುಬೇಗನೆ ಎಲ್ಲೆಡೆ ಹಬ್ಬಿದೆ. ಹೀಗಾಗಿ ಘಟಕದಲ್ಲಿದ್ದ ಎಲ್ಲರೂ ಆಚೆ ಓಡಿ ಬಂದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಬರೋಬ್ಬರಿ 10.26 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಘಟಕದಲ್ಲಿ ಇರಿಸಲಾಗಿದ್ದ 9 ಕ್ವಿಂಟಾಲ್‌ ಸಕ್ಕರೆ, 96 ಕೆಜಿ ಕಡ್ಲೆ ಹಿಟ್ಟು, 40 ಕೆಜಿ ನಂದಿನಿತುಪ್ಪ, 30 ಕೆಜಿ ದ್ರಾಕ್ಷಿ ಹಾಗೂ 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿದೆ. ಇನ್ನು ಈ ಅವಘಡದಿಂದ ಲಾಡು ಕೊರತೆ ಉಂಟಾಗಿದ್ದು ಮಹದೇಶ್ವರ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಲಾಡು ಮಾರಾಟ ನಿಲ್ಲಿಸಲಾಗಿದೆ.

andolana

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

29 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago