ನಿನ್ನೆ ( ಡಿಸೆಂಬರ್ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್ ಖಾಲಿಯಾದ ಕಾರಣ ಸಿಬ್ಬಂದಿಯೊಬ್ಬರು ಅದನ್ನು ಬದಲಿಸಲು ಹೋದಾಗ ಈ ಅವಘಡ ಸಂಭವಿಸಿದೆ.
ಲಾಡು ತಯಾರಿಕಾ ಘಟಕವಾದ ಕಾರಣ ಎಣ್ಣೆ ಹಾಗೂ ಜಿಡ್ಡಿನ ಅಂಶ ಮತ್ತು ಎಣ್ಣೆ ಪದಾರ್ಥಗಳೇ ಹೆಚ್ಚಿದ್ದ ಕಾರಣ ಬೆಂಕಿ ಬಹುಬೇಗನೆ ಎಲ್ಲೆಡೆ ಹಬ್ಬಿದೆ. ಹೀಗಾಗಿ ಘಟಕದಲ್ಲಿದ್ದ ಎಲ್ಲರೂ ಆಚೆ ಓಡಿ ಬಂದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಬರೋಬ್ಬರಿ 10.26 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಘಟಕದಲ್ಲಿ ಇರಿಸಲಾಗಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆ ಹಿಟ್ಟು, 40 ಕೆಜಿ ನಂದಿನಿತುಪ್ಪ, 30 ಕೆಜಿ ದ್ರಾಕ್ಷಿ ಹಾಗೂ 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿದೆ. ಇನ್ನು ಈ ಅವಘಡದಿಂದ ಲಾಡು ಕೊರತೆ ಉಂಟಾಗಿದ್ದು ಮಹದೇಶ್ವರ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಲಾಡು ಮಾರಾಟ ನಿಲ್ಲಿಸಲಾಗಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…