ಜಿಲ್ಲೆಗಳು

ಮಹದೇಶ್ವರ ಬೆಟ್ಟ ಲಾಡು ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದದ್ದರಿಂದ ನಷ್ಟವಾದ ಹಣವೆಷ್ಟು?

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್‌ ಖಾಲಿಯಾದ ಕಾರಣ ಸಿಬ್ಬಂದಿಯೊಬ್ಬರು ಅದನ್ನು ಬದಲಿಸಲು ಹೋದಾಗ ಈ ಅವಘಡ ಸಂಭವಿಸಿದೆ.

ಲಾಡು ತಯಾರಿಕಾ ಘಟಕವಾದ ಕಾರಣ ಎಣ್ಣೆ ಹಾಗೂ ಜಿಡ್ಡಿನ ಅಂಶ ಮತ್ತು ಎಣ್ಣೆ ಪದಾರ್ಥಗಳೇ ಹೆಚ್ಚಿದ್ದ ಕಾರಣ ಬೆಂಕಿ ಬಹುಬೇಗನೆ ಎಲ್ಲೆಡೆ ಹಬ್ಬಿದೆ. ಹೀಗಾಗಿ ಘಟಕದಲ್ಲಿದ್ದ ಎಲ್ಲರೂ ಆಚೆ ಓಡಿ ಬಂದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಬರೋಬ್ಬರಿ 10.26 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಘಟಕದಲ್ಲಿ ಇರಿಸಲಾಗಿದ್ದ 9 ಕ್ವಿಂಟಾಲ್‌ ಸಕ್ಕರೆ, 96 ಕೆಜಿ ಕಡ್ಲೆ ಹಿಟ್ಟು, 40 ಕೆಜಿ ನಂದಿನಿತುಪ್ಪ, 30 ಕೆಜಿ ದ್ರಾಕ್ಷಿ ಹಾಗೂ 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿದೆ. ಇನ್ನು ಈ ಅವಘಡದಿಂದ ಲಾಡು ಕೊರತೆ ಉಂಟಾಗಿದ್ದು ಮಹದೇಶ್ವರ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಲಾಡು ಮಾರಾಟ ನಿಲ್ಲಿಸಲಾಗಿದೆ.

andolana

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

1 hour ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

1 hour ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago