ನಿನ್ನೆ ( ಡಿಸೆಂಬರ್ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್ ಖಾಲಿಯಾದ ಕಾರಣ ಸಿಬ್ಬಂದಿಯೊಬ್ಬರು ಅದನ್ನು ಬದಲಿಸಲು ಹೋದಾಗ ಈ ಅವಘಡ ಸಂಭವಿಸಿದೆ.
ಲಾಡು ತಯಾರಿಕಾ ಘಟಕವಾದ ಕಾರಣ ಎಣ್ಣೆ ಹಾಗೂ ಜಿಡ್ಡಿನ ಅಂಶ ಮತ್ತು ಎಣ್ಣೆ ಪದಾರ್ಥಗಳೇ ಹೆಚ್ಚಿದ್ದ ಕಾರಣ ಬೆಂಕಿ ಬಹುಬೇಗನೆ ಎಲ್ಲೆಡೆ ಹಬ್ಬಿದೆ. ಹೀಗಾಗಿ ಘಟಕದಲ್ಲಿದ್ದ ಎಲ್ಲರೂ ಆಚೆ ಓಡಿ ಬಂದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಬರೋಬ್ಬರಿ 10.26 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಘಟಕದಲ್ಲಿ ಇರಿಸಲಾಗಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆ ಹಿಟ್ಟು, 40 ಕೆಜಿ ನಂದಿನಿತುಪ್ಪ, 30 ಕೆಜಿ ದ್ರಾಕ್ಷಿ ಹಾಗೂ 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿದೆ. ಇನ್ನು ಈ ಅವಘಡದಿಂದ ಲಾಡು ಕೊರತೆ ಉಂಟಾಗಿದ್ದು ಮಹದೇಶ್ವರ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಲಾಡು ಮಾರಾಟ ನಿಲ್ಲಿಸಲಾಗಿದೆ.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…