ಜಿಲ್ಲೆಗಳು

ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬು ಬೆಳೆ ನಾಶ

ಸಾಲಿಗ್ರಾಮ: ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಬೆಳೆ ನಾಶವಾಗಿರುವ ಘಟನೆ ತಾಲ್ಲೂಕಿನ ಮಿರ್ಲೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ದಿ.ಎಂ.ಕೆ.ಕೋಟೆಗೌಡರ ಪುತ್ರ ಎಂ.ಕೆ.ಮೃತ್ಯುಂಜಯ ಎಂಬವರಿಗೆ ಸೇರಿದ ಸರ್ವೆ ನಂಬರ್ ೨೬೩ರಲ್ಲಿ ೩ ಎಕರೆ ೩೦ ಗುಂಟೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಬ್ಬಿನ ಬೆಳೆಯು ಸಂಪೂರ್ಣವಾಗಿ ನಾಶವಾಗಿದೆ. ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ ಸುದ್ದಿ ತಿಳಿದ ತಕ್ಷಣ ಕೆ.ಆರ್.ನಗರದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿ ಮುಂದೆ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಘಟನೆಯಿಂದ ಎಂ.ಕೆ.ಮೃತ್ಯುಂಜಯ ಅವರಿಗೆ ಅಪಾರ ನಷ್ಟ ಉಂಟಾಗಿದೆ. ಇವರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

andolanait

Recent Posts

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

50 mins ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

54 mins ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

1 hour ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

2 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

3 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

3 hours ago