ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣ ಸಮಿತಿ ಸದಸ್ಯ ಶಂಕರ ಸಿ ಅಂಕನಶಟ್ಟಿಪುರ ಅವರು ಮಾತನಾಡಿ ೧೯೭೧ ರಲ್ಲಿ ಬಿ.ಬಸಲಿಂಗಪ್ಪ ಅವರು ಪೌರಾಡಳಿತ ಸಚಿವರಾಗಿದ್ದ ಸಂದರ್ಭದಲ್ಲಿ ಮಲ ಹೊರುವ ಪದ್ಧತಿ ರದ್ದು ಮಾಡುವ ವಿಧೇಯಕ ಮಂಡನೆ ಮಾಡುತ್ತಾರೆ. ಅದೇ ವೇಳೆ ಜಾಡಮಾಲಿ ಪದ ತೆಗೆದು ಪೌರಕಾರ್ಮಿಕ ಅನ್ನೋ ಪದ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದ ನೆನಪಿನಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾತ್ರ ಈ ವರೆಗೂ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿತ್ತು, ಆದರೆ ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ಆಚರಣೆ ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದ್ದು ಈ ದಿನ ಇತಿಹಾಸದ ಪುಟಗಳಲ್ಲಿ ಸೇರಿತು ಎಂದು ತಿಳಿಸಿದರು. ಈ ವೇಳೆ ೨೨ ಜನ ಪೌರಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ನಿವೃತ್ತ ಇಂಜಿನಿಯರ್ ಕುಮಾರ್, ಪರಿಸರ ಮತ್ತು ಆರೋಗ್ಯ ಸಲಹೆಗಾರ ಜಗದೀಶ್, ಪ್ರಾಧಿಕಾರದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್, ಉಪಕಾರ್ಯದರ್ಶಿ ಬಸವರಾಜು, ಅಪ್ಪಿ ನಾಗೇಂದ್ರ, ಎಂ ಪಿ ಗೋಪಾಲ್ ನಾಗೇಶ್ ಹಾಗೂ ನೂರಕ್ಕೂ ಹೆಚ್ಚು ಪೌರಕಾರ್ಮಿಕರು ಉಪಸ್ಥಿತರಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…