ಜಿಲ್ಲೆಗಳು

ಚಾ.ನಗರ; ಮಾದಪ್ಪನ ಬೆಟ್ಟದಲ್ಲಿ ಮೊದಲ ಬಾರಿಗೆ ಪೌರಕಾರ್ಮಿಕ ದಿನಾಚರಣೆ

ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. 

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿನೆ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣ ಸಮಿತಿ ಸದಸ್ಯ ಶಂಕರ ಸಿ ಅಂಕನಶಟ್ಟಿಪುರ ಅವರು ಮಾತನಾಡಿ ೧೯೭೧ ರಲ್ಲಿ ಬಿ.ಬಸಲಿಂಗಪ್ಪ ಅವರು ಪೌರಾಡಳಿತ ಸಚಿವರಾಗಿದ್ದ ಸಂದರ್ಭದಲ್ಲಿ ಮಲ ಹೊರುವ ಪದ್ಧತಿ ರದ್ದು ಮಾಡುವ ವಿಧೇಯಕ ಮಂಡನೆ ಮಾಡುತ್ತಾರೆ. ಅದೇ ವೇಳೆ ಜಾಡಮಾಲಿ ಪದ ತೆಗೆದು ಪೌರಕಾರ್ಮಿಕ ಅನ್ನೋ ಪದ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದ ನೆನಪಿನಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. 

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾತ್ರ ಈ ವರೆಗೂ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿತ್ತು, ಆದರೆ ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ಆಚರಣೆ ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದ್ದು ಈ ದಿನ ಇತಿಹಾಸದ ಪುಟಗಳಲ್ಲಿ ಸೇರಿತು ಎಂದು ತಿಳಿಸಿದರು. ಈ ವೇಳೆ ೨೨ ಜನ ಪೌರಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ನಿವೃತ್ತ ಇಂಜಿನಿಯರ್ ಕುಮಾರ್, ಪರಿಸರ ಮತ್ತು ಆರೋಗ್ಯ ಸಲಹೆಗಾರ ಜಗದೀಶ್, ಪ್ರಾಧಿಕಾರದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್, ಉಪಕಾರ್ಯದರ್ಶಿ ಬಸವರಾಜು, ಅಪ್ಪಿ ನಾಗೇಂದ್ರ, ಎಂ ಪಿ ಗೋಪಾಲ್ ನಾಗೇಶ್ ಹಾಗೂ ನೂರಕ್ಕೂ ಹೆಚ್ಚು ಪೌರಕಾರ್ಮಿಕರು ಉಪಸ್ಥಿತರಿದ್ದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago