ಜಿಲ್ಲೆಗಳು

ಗುಂಡಾಲ್ ಜಲಾಶಯ ಭರ್ತಿ : ಬಾಗಿನ ಅರ್ಪಿಸಿದ ಶಾಸಕ ಆರ್. ನರೇಂದ್ರ

ಹನೂರು: ಗುಂಡಾಲ್ ಜಲಾಶಯ ನಿರ್ಮಾಣ ಮಾಡಿ 35 ವರ್ಷಗಳು ಕಳೆದಿದೆ,ಆದರೆ ಆಗಸ್ಟ್ ನಲ್ಲಿ ಇದೇ ಮೊದಲ ಬಾರಿಗೆ ಜಲಾಶಯ ಭರ್ತಿಯಾಗಿರುವುದು ಸಂತೋಷ ತಂದಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಗುಂಡಾಲ್ ಜಲಾಶಯದಲ್ಲಿ ಶೇಖರಣೆಯಾಗುವ ನೀರಿನಲ್ಲಿ 17.5ಸಾವಿರ ಎಕರೆಗೆ ಕೃಷಿಗೆ ಬಳಸಬಹುದಾಗಿದೆ ಆದರೆ ನಿರ್ವಹಣೆ ಕೊರತೆಯಿಂದ ಕೇವಲ 3 ಸಾವಿರ ಎಕರೆಗಷ್ಟೇ ಜಲಾಶಯದ ನೀರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.ಕಳೆದ 2 ವರ್ಷಗಳು ಕರೋನಾ ಇದ್ಧ ಹಿನ್ನೆಲೆ ಸರ್ಕಾರ ಜಲಾಶಯದ ಅಭಿವದ್ಧಿಗೆ ಅನುದಾನ ನೀಡಲಿಲ್ಲ ಈ ಸಾಲಿನಲ್ಲಿ ನೀಡಿರುವ 20ಲಕ್ಷ ಅನುದಾನದಲ್ಲಿ ಎಡದಂಡೆ ಹಾಗೂ ಬಲದಂಡೆ ಗೇಟ್ ವಾಲ್ಅಭಿವದ್ಧಿ ಪಡಿಸಲಾಗಿದೆ. ಇರುವ ನಾಲೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಸರಾಗವಾಗಿ ಹೋಗಲು ತೊಂದರೆಯಾಗಿದೆ ಈ ಬಗ್ಗೆ ಜಲಸಂಪನ್ಮೂಲ ಇಲಾಖೆಯ ಸಚಿವರಿಗೆ ಮೂವತ್ತು ಕೋಟಿ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಲಿಲ್ಲ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ತಂದು ಜಲಾಶಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಈಗಾಗಲೇ ಕೆರೆ ತುಂಬಿಸುವ ಯೋಜನೆಯಲ್ಲಿ ಈ ಜಲಾಶಯಕ್ಕೆ ಕಾವೇರಿ ನೀರು ತುಂಬಿಸಲು ಕ್ರಮಕೈಗೊಳ್ಳಲಾಗಿದೆ. ಜಲಾಶಯದ ನೀರನ್ನು ಎಡದಂಡೆ ಹಾಗೂ ಬಲದಂಡೆಯ ರೈತರು ಬಳಸಿಕೊಂಡಾಗ ಮಾತ್ರ ಜಲಾಶಯ ನಿರ್ಮಾಣ ಮಾಡಿರುವುದು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮದುವನಹಳ್ಳಿ ಶಿವಕುಮಾರ್ ದೊಡ್ಡಿಂದವಾಡಿ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…

8 mins ago

ರಾಜ್ಯದಲ್ಲಿ ಪದೇ ಪದೇ ಡ್ರಗ್ಸ್‌ ಜಾಲ ಪತ್ತೆ : ಪೊಲೀಸರನ್ನ ತೀವ್ರ ತರಾಟೆಗೆ ತೆಗೆದುಕೊಂಡ ಹೋಂ ಮಿನಿಸ್ಟರ್‌

ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…

38 mins ago

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…

53 mins ago

ನಾಳೆ ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…

1 hour ago

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

1 hour ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

2 hours ago