ಜಿಲ್ಲೆಗಳು

ಗುಂಡಾಲ್ ಜಲಾಶಯ ಭರ್ತಿ : ಬಾಗಿನ ಅರ್ಪಿಸಿದ ಶಾಸಕ ಆರ್. ನರೇಂದ್ರ

ಹನೂರು: ಗುಂಡಾಲ್ ಜಲಾಶಯ ನಿರ್ಮಾಣ ಮಾಡಿ 35 ವರ್ಷಗಳು ಕಳೆದಿದೆ,ಆದರೆ ಆಗಸ್ಟ್ ನಲ್ಲಿ ಇದೇ ಮೊದಲ ಬಾರಿಗೆ ಜಲಾಶಯ ಭರ್ತಿಯಾಗಿರುವುದು ಸಂತೋಷ ತಂದಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಗುಂಡಾಲ್ ಜಲಾಶಯದಲ್ಲಿ ಶೇಖರಣೆಯಾಗುವ ನೀರಿನಲ್ಲಿ 17.5ಸಾವಿರ ಎಕರೆಗೆ ಕೃಷಿಗೆ ಬಳಸಬಹುದಾಗಿದೆ ಆದರೆ ನಿರ್ವಹಣೆ ಕೊರತೆಯಿಂದ ಕೇವಲ 3 ಸಾವಿರ ಎಕರೆಗಷ್ಟೇ ಜಲಾಶಯದ ನೀರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.ಕಳೆದ 2 ವರ್ಷಗಳು ಕರೋನಾ ಇದ್ಧ ಹಿನ್ನೆಲೆ ಸರ್ಕಾರ ಜಲಾಶಯದ ಅಭಿವದ್ಧಿಗೆ ಅನುದಾನ ನೀಡಲಿಲ್ಲ ಈ ಸಾಲಿನಲ್ಲಿ ನೀಡಿರುವ 20ಲಕ್ಷ ಅನುದಾನದಲ್ಲಿ ಎಡದಂಡೆ ಹಾಗೂ ಬಲದಂಡೆ ಗೇಟ್ ವಾಲ್ಅಭಿವದ್ಧಿ ಪಡಿಸಲಾಗಿದೆ. ಇರುವ ನಾಲೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಸರಾಗವಾಗಿ ಹೋಗಲು ತೊಂದರೆಯಾಗಿದೆ ಈ ಬಗ್ಗೆ ಜಲಸಂಪನ್ಮೂಲ ಇಲಾಖೆಯ ಸಚಿವರಿಗೆ ಮೂವತ್ತು ಕೋಟಿ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಲಿಲ್ಲ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ತಂದು ಜಲಾಶಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಈಗಾಗಲೇ ಕೆರೆ ತುಂಬಿಸುವ ಯೋಜನೆಯಲ್ಲಿ ಈ ಜಲಾಶಯಕ್ಕೆ ಕಾವೇರಿ ನೀರು ತುಂಬಿಸಲು ಕ್ರಮಕೈಗೊಳ್ಳಲಾಗಿದೆ. ಜಲಾಶಯದ ನೀರನ್ನು ಎಡದಂಡೆ ಹಾಗೂ ಬಲದಂಡೆಯ ರೈತರು ಬಳಸಿಕೊಂಡಾಗ ಮಾತ್ರ ಜಲಾಶಯ ನಿರ್ಮಾಣ ಮಾಡಿರುವುದು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮದುವನಹಳ್ಳಿ ಶಿವಕುಮಾರ್ ದೊಡ್ಡಿಂದವಾಡಿ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

17 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

18 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

24 hours ago