ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜನೆ
ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಸೆ.೨೭ರಿಂದ ೯ ದಿನಗಳ ಕಾಲ ವೈದ್ಯಕೀಯ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.
ಸೆ.೨೭ರಂದು ಬೆಳಿಗ್ಗೆ ೧೧ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಪ್ರದರ್ಶನಕ್ಕೆ ಚಾಲನೆ ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ ದೇಹದ ರಚನೆ ಹೇಗಿರುತ್ತದೆ? ಕಾಯಿಲೆ ಬಂದಾಗ ಯಾವ ರೀತಿ ಇರುತ್ತದೆ? ಎನ್ನುವುದನ್ನು ಸಾಕ್ಷೀಕರಿಸುವ ಅಂಗಾಗಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಗುತ್ತದೆ.
ಪ್ರತಿಯೊಬ್ಬರು ಆರೋಗ್ಯ ಕೆಡದಂತೆ ಮಿತ ಆಹಾರ ಬಳಕೆ ಮಾಡುವುದು, ಜೀವನ ಶೈಲಿ, ವ್ಯಾಯಾಮ ಮಾಡಿ ದೇಹವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವುದು, ದೀರ್ಘಾವಧಿ ಬದುಕು ಸಾಧಿಸಲು ಶರೀರದ ಭಾಗಗಳು ಯಾವ ರೀತಿ ಕೆಲಸ ಮಾಡಲಿವೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಗುತ್ತದೆ. ಧೂಮಪಾನ, ಮದ್ಯಪಾನದಿಂದ ಉಂಟಾಗುವ ಸಮಸ್ಯೆಗಳು, ಕಾಯಿಲೆ ಬಂದಾಗ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸಲು ಆಸ್ಪತ್ರೆಗಳು ನಿರ್ವಹಿಸುವ ಕಾರ್ಯ, ಚಿಕಿತ್ಸಾ ವಿಧಾನ, ವೈದ್ಯರ ಪಾತ್ರದ ಕುರಿತಂತೆ ಹೇಳಲಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಮೂರು ಪ್ರಮುಖ ವಿಚಾರಗಳಿದ್ದು, ಸ್ಕ್ರೀನಿಂಗ್, ರೋಗಪತ್ತೆ ಮತ್ತು ಚಿಕಿತ್ಸೆ ನೀಡುವುದು ಪ್ರಮುಖವಾಗಿರುವುದರಿಂದ ಹಿರಿಯ ತಜ್ಞ ವೈದ್ಯರು ಪ್ರದರ್ಶನದಲ್ಲಿ ಮಾಹಿತಿ ಕೊಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ತಿಳಿಸಿದರು.
ದಸರಾ ಮಹೋತ್ಸವ ಸಂದರ್ಭದಲ್ಲಿ ಮೊದಲ ಬಾರಿಗೆ ವೈದ್ಯಕೀಯ ವಸ್ತು ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು ವೀಕ್ಷಿಸಿ ಪ್ರಯೋಜನ ಪಡೆಯಬೇಕು. ಆರೋಗ್ಯ ಕಾಪಾಡುವಂತಹ ಪ್ರಮುಖ ಅಂಶಗಳನ್ನು ದೇಹದ ಅಂಗಾಂಗಗಳ ಮೂಲಕವೇ ವಿವರಿಸಲಾಗುತ್ತದೆ.
-ಡಾ.ಕೆ.ಎಚ್.ಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…