ಜಿಲ್ಲೆಗಳು

ಇದೇ ಮೊದಲ ಬಾರಿಗೆ ವೈದ್ಯಕೀಯ ವಸ್ತು ಪ್ರದರ್ಶನ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜನೆ

ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಸೆ.೨೭ರಿಂದ ೯ ದಿನಗಳ ಕಾಲ ವೈದ್ಯಕೀಯ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.
ಸೆ.೨೭ರಂದು ಬೆಳಿಗ್ಗೆ ೧೧ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಪ್ರದರ್ಶನಕ್ಕೆ ಚಾಲನೆ ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ ದೇಹದ ರಚನೆ ಹೇಗಿರುತ್ತದೆ? ಕಾಯಿಲೆ ಬಂದಾಗ ಯಾವ ರೀತಿ ಇರುತ್ತದೆ? ಎನ್ನುವುದನ್ನು ಸಾಕ್ಷೀಕರಿಸುವ ಅಂಗಾಗಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಗುತ್ತದೆ.
ಪ್ರತಿಯೊಬ್ಬರು ಆರೋಗ್ಯ ಕೆಡದಂತೆ ಮಿತ ಆಹಾರ ಬಳಕೆ ಮಾಡುವುದು, ಜೀವನ ಶೈಲಿ, ವ್ಯಾಯಾಮ ಮಾಡಿ ದೇಹವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವುದು, ದೀರ್ಘಾವಧಿ ಬದುಕು ಸಾಧಿಸಲು ಶರೀರದ ಭಾಗಗಳು ಯಾವ ರೀತಿ ಕೆಲಸ ಮಾಡಲಿವೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಗುತ್ತದೆ. ಧೂಮಪಾನ, ಮದ್ಯಪಾನದಿಂದ ಉಂಟಾಗುವ ಸಮಸ್ಯೆಗಳು, ಕಾಯಿಲೆ ಬಂದಾಗ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸಲು ಆಸ್ಪತ್ರೆಗಳು ನಿರ್ವಹಿಸುವ ಕಾರ್ಯ, ಚಿಕಿತ್ಸಾ ವಿಧಾನ, ವೈದ್ಯರ ಪಾತ್ರದ ಕುರಿತಂತೆ ಹೇಳಲಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಮೂರು ಪ್ರಮುಖ ವಿಚಾರಗಳಿದ್ದು, ಸ್ಕ್ರೀನಿಂಗ್, ರೋಗಪತ್ತೆ ಮತ್ತು ಚಿಕಿತ್ಸೆ ನೀಡುವುದು ಪ್ರಮುಖವಾಗಿರುವುದರಿಂದ ಹಿರಿಯ ತಜ್ಞ ವೈದ್ಯರು ಪ್ರದರ್ಶನದಲ್ಲಿ ಮಾಹಿತಿ ಕೊಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ತಿಳಿಸಿದರು.

ದಸರಾ ಮಹೋತ್ಸವ ಸಂದರ್ಭದಲ್ಲಿ ಮೊದಲ ಬಾರಿಗೆ ವೈದ್ಯಕೀಯ ವಸ್ತು ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು ವೀಕ್ಷಿಸಿ ಪ್ರಯೋಜನ ಪಡೆಯಬೇಕು. ಆರೋಗ್ಯ ಕಾಪಾಡುವಂತಹ ಪ್ರಮುಖ ಅಂಶಗಳನ್ನು ದೇಹದ ಅಂಗಾಂಗಗಳ ಮೂಲಕವೇ ವಿವರಿಸಲಾಗುತ್ತದೆ.

-ಡಾ.ಕೆ.ಎಚ್.ಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

andolanait

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago