ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜನೆ
ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಸೆ.೨೭ರಿಂದ ೯ ದಿನಗಳ ಕಾಲ ವೈದ್ಯಕೀಯ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.
ಸೆ.೨೭ರಂದು ಬೆಳಿಗ್ಗೆ ೧೧ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಪ್ರದರ್ಶನಕ್ಕೆ ಚಾಲನೆ ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ ದೇಹದ ರಚನೆ ಹೇಗಿರುತ್ತದೆ? ಕಾಯಿಲೆ ಬಂದಾಗ ಯಾವ ರೀತಿ ಇರುತ್ತದೆ? ಎನ್ನುವುದನ್ನು ಸಾಕ್ಷೀಕರಿಸುವ ಅಂಗಾಗಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಗುತ್ತದೆ.
ಪ್ರತಿಯೊಬ್ಬರು ಆರೋಗ್ಯ ಕೆಡದಂತೆ ಮಿತ ಆಹಾರ ಬಳಕೆ ಮಾಡುವುದು, ಜೀವನ ಶೈಲಿ, ವ್ಯಾಯಾಮ ಮಾಡಿ ದೇಹವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವುದು, ದೀರ್ಘಾವಧಿ ಬದುಕು ಸಾಧಿಸಲು ಶರೀರದ ಭಾಗಗಳು ಯಾವ ರೀತಿ ಕೆಲಸ ಮಾಡಲಿವೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಗುತ್ತದೆ. ಧೂಮಪಾನ, ಮದ್ಯಪಾನದಿಂದ ಉಂಟಾಗುವ ಸಮಸ್ಯೆಗಳು, ಕಾಯಿಲೆ ಬಂದಾಗ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸಲು ಆಸ್ಪತ್ರೆಗಳು ನಿರ್ವಹಿಸುವ ಕಾರ್ಯ, ಚಿಕಿತ್ಸಾ ವಿಧಾನ, ವೈದ್ಯರ ಪಾತ್ರದ ಕುರಿತಂತೆ ಹೇಳಲಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಮೂರು ಪ್ರಮುಖ ವಿಚಾರಗಳಿದ್ದು, ಸ್ಕ್ರೀನಿಂಗ್, ರೋಗಪತ್ತೆ ಮತ್ತು ಚಿಕಿತ್ಸೆ ನೀಡುವುದು ಪ್ರಮುಖವಾಗಿರುವುದರಿಂದ ಹಿರಿಯ ತಜ್ಞ ವೈದ್ಯರು ಪ್ರದರ್ಶನದಲ್ಲಿ ಮಾಹಿತಿ ಕೊಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ತಿಳಿಸಿದರು.
ದಸರಾ ಮಹೋತ್ಸವ ಸಂದರ್ಭದಲ್ಲಿ ಮೊದಲ ಬಾರಿಗೆ ವೈದ್ಯಕೀಯ ವಸ್ತು ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು ವೀಕ್ಷಿಸಿ ಪ್ರಯೋಜನ ಪಡೆಯಬೇಕು. ಆರೋಗ್ಯ ಕಾಪಾಡುವಂತಹ ಪ್ರಮುಖ ಅಂಶಗಳನ್ನು ದೇಹದ ಅಂಗಾಂಗಗಳ ಮೂಲಕವೇ ವಿವರಿಸಲಾಗುತ್ತದೆ.
-ಡಾ.ಕೆ.ಎಚ್.ಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…