ಜಿಲ್ಲೆಗಳು

ಮೊನ್ನೆ ಮಾರಿಗೆ 40 ರೂ. ಇದ್ದ ಸೇವಂತಿಗೆ ಇಂದು 300 ರೂ. !

ಮೈಸೂರು: ಒಂದು ಮಾರು ಸೇವಂತಿಗೆಗೆ 300 ರೂ…. ಅಯ್ಯೋ, ಅಷ್ಟೊಂದಾ ಎಂದರೆ, “ಬೇಕಿದ್ದರೆ ತಗೊಳ್ಳಿ. ಇಲ್ಲವಾದರೆ ಬಿಡಿʼಎನ್ನುವ ಉತ್ತರ. ಇನ್ನು ಮುಂದಕ್ಕೆ ಸಾಗಿದರೆ 200 ರೂ. ಗೂ ಮಾರುವವರಿದ್ದಾರೆ. ಆದರೆ ಹೂವು ತಾಜಾ ಇಲ್ಲ ಎನ್ನುವ ಕೊರಗು. ಇನ್ನೂ ಸ್ವಲ್ಪ ಮುಂದಕ್ಕೆ ನೋಡೋಣ ಎಂದು ಮುಂದುವರಿದರೆ 150ರೂ.ಗೂ ಮಾರು ಲಭ್ಯ. ಆದರೆ ಬಿಡಿ, ಬಿಡಿಯಾಗಿ ಕಟ್ಟಿದ ಮಾರಿನಲ್ಲಿ ಹೂವಿಗಿಂತ ದಾರವೇ ಎದ್ದು ಕಾಣುತ್ತಿತ್ತು…ಇದು ಮೈಸೂರಿನ ಎಂ. ಜಿ. ರಸ್ತೆಯಲ್ಲಿ ಸೋಮವಾರ ಕಂಡು ಬಂದ ಚಿತ್ರಣ.

ಬೆಲೆ ಏರಿಕೆಯಲ್ಲಿ ನಲುಗಿರುವ ಜನಸಾಮಾನ್ಯರು, ಸೋಮವಾರ ಆಯುಧ ಪೂಜೆಗೆ ಅಗತ್ಯವಾದ ಹೂವು, ನಿಂಬೆ, ಕುಂಬಳಕಾಯಿ ಜತೆ ಒಂದಷ್ಟು ತರಕಾರಿಗಳ ಖರೀದಿಗೆ ಮುಗಿಬಿದ್ದಿದ್ದರು. ಆದರೆ ಹೂವು- ಹಣ್ಣುಗಳ ಬೆಲೆ ಕೇಳಿ ಎಲ್ಲರೂ ಮುಖವೂ ಬಾಡಿ ಹೋಗುತ್ತಿತ್ತು. ಸಾಂಪ್ರದಾಯಿಕ ಹಬ್ಬದ ಆಚರಣೆ ಕೈ ಬಿಡಲಾಗದೆ, ಬೇಕಾದ ಪರಿಕರಗಳನ್ನು ಮನಸ್ಸಿಗೆ ಹಿಡಿಸುವಷ್ಟು ಕೊಳ್ಳಲಾಗದೆ ಪರಿತಪಿಸುವ ದೃಶ್ಯ ಅವರ ಮುಖಭಾವದಲ್ಲೇ ಕಾಣುತ್ತಿತ್ತು.


ಕಳೆದ ವಾರ ಒಂದು ಮಾರಿಗೆ 30 ರಿಂದ 40 ರೂ. ಇದ್ದ ಸೇವಂತಿಗೆ ಸೋಮವಾರ 150 ರಿಂದ 300 ರೂ.ಗೆ ಮಾರಾಟವಾಗುತ್ತಿದ್ದುದು ಕಂಡುಬಂತು. ಆದರೆ ಇಲ್ಲಿ ರೈತರಿಗಿಂತ ಮಧ್ಯವರ್ತಿಗಳ ಆಟ ಎದ್ದು ಕಾಣುತ್ತಿತ್ತು. ಇನ್ನು ಬಿಡಿ ಹೂಗಳ ಬೆಲೆ ಕೂಡ ಗ್ರಾಹಕರ ಕೈ ಸುಡುತ್ತಿದೆ. ದೇವರಾಜ ಮಾರುಕಟ್ಟೆಯಲ್ಲಿ ಮಲ್ಲಿಗೆ ಹೂ ಕೆಜಿ ಒಂದಕ್ಕೆ ಒಂದು ಸಾವಿರ ರೂ., ಕಾಕಡ 800 ರೂ., ಮರ್ಲೆ 6೦೦ ರೂ., ಸುಗಂಧರಾಜ 280 ರೂ., ಕನಕಾಂಬರ 1500 ರೂ., ಗುಲಾಬಿ ಹೂ ಕೆಜಿಗೆ 320 ರೂ.ಗೆ ಮಾರಾಟವಾಗಿದೆ.

ಆಯುಧ ಪೂಜೆಗೆ ಬಳಸಲಾಗುವ ಬೂದುಗುಂಬಳ ಕೂಡ ಗ್ರಾಹಕರ ಕೈ ಸುಡುತಿದ್ದು, ಕೆಜಿ 40 ರಿಂದ 50 ರೂ.ಗೆ ಮಾರಾಟವಾಗುತ್ತಿದೆ. ಅನ್ಯ ರಾಜ್ಯಗಳಿಂದಲೂ ಬೂದುಗುಂಬಳ ಬಂದಿಲ್ಲ ದಸರಾ ಹಬ್ಬಕ್ಕೆಂದು ತಮಿಳುನಾಡು, ಆಂಧ್ರಪ್ರದೇಶದಿಂದ ರಾಶಿಗಟ್ಟಲೆ ಬೂದುಗುಂಬಳಕಾಯಿ ಮಾರುಕಟ್ಟೆಗೆ ಬರುತ್ತಿತ್ತು. ಈ ಬಾರಿ ಅನ್ಯ ರಾಜ್ಯಗಳಲ್ಲೂ ಮಳೆಯಿಂದ ಬೆಳೆಯಿಲ್ಲ. ಹೀಗಾಗಿ, ತುಂಬಾ ಕಡಿಮೆ ಪ್ರಮಾಣದಲ್ಲಿ ಬೂದುಗುಂಬಳ ಬಂದಿದೆ. ಆದರೆ ಬೇಡಿಕೆ ಹೆಚ್ಚಾಗಿರುವುರಿಂದ ಬೆಲೆಗಳು ಗಗನಕ್ಕೇರಿವೆ.

ಹಣ್ಣು ತರಕಾರಿಗಳ ಬೆಲೆ ಈ ಬಾರಿ ಹಬ್ಬಕ್ಕೆ ಮುನ್ನವೇ ಏರಿಕೆಯಾಗಿತ್ತು. ಟೊಮೆಟೋ, ಬೆಂಡೆಕಾಯಿ ಹೊರತುಪಡಿಸಿ ಬಹುತೇಕ ಎಲ್ಲ ತರಕಾರಿಗಳ ಬೆಲೆ 50ರ ಆಸುಪಾಸು ದಾಟಿದ್ದು, ಗ್ರಾಹಕರಿಗೆ ತಲೆನೋವಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ಸುಮಾರು 2 ತಿಂಗಳಿನಿಂದ ಸುರಿದ ನಿರಂತರ ಮಳೆಗೆ ತರಕಾರಿ ಹೊಲದಲ್ಲೇ ಕೊಳೆತು ಹೋಗಿವೆ. ಹೀಗಾಗಿ ಮಾರುಕಟ್ಟೆಗೆ ತರಕಾರಿ ಬರುವ ಪ್ರಮಾಣ ಕಡಿಮೆಯಾಗಿದೆ. ಇದರಿಂದಾಗಿ ತರಕಾರಿ ಖರೀದಿಗೆಂದು ಬರುವ ಗ್ರಾಹಕರು ತರಕಾರಿ ಬೆಲೆ ಕಂಡು ಹೌಹಾರುವಂತಾಗಿದೆ.

ಸುಮಾರು ಒಂದು ತಿಂಗಳಿನಿಂದ ಖರೀದಿದಾರರಿಗೆ ತರಕಾರಿ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಒಂದು ತಿಂಗಳ ಹಿಂದೆ ಇದ್ದ ದರ ಇಂದು ಇಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಕೆಲ ತರಕಾರಿಗಳ ಬೆಲೆ ಮೂರು ಪಟ್ಟು ಹೆಚ್ಚಳವಾಗಿದೆ. ಹೊಸದಾಗಿ ತರಕಾರಿ ಬೆಳೆ ರೈತರ ಕೈ ಸೇರುವವರೆಗೂ ಜನರು ಇದೇ ಸ್ಥಿತಿಯನ್ನು ಎದುರಿಸಬೇಕು ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಒಂದು ಕೆಜಿ ಕ್ಯಾರೇಟ್ ಬೆಲೆ 80 ರೂ. ಮುಟ್ಟಿದೆ. ಕೆಜಿ ಬೀನ್ಸ್ 75 ರಿಂದ 80 ರೂ.ಗೆ ಮಾರಾಟವಾಗುತ್ತಿದೆ. ಹಾಗಲಕಾಯಿಯೂ 50 ಗಡಿ ದಾಟಿದೆ. ಸೀಮೆ ಬದನೆ ಮಾತ್ರ 25ರೂ. ಗೆ ಸಿಗುತ್ತಿದೆ.

ಕ್ಯಾರೇಟ್ 80 ರೂ.

ಬೀನ್ಸ್ 75 ರಿಂದ 80 ರೂ.

ಮೂಲಂಗಿ 60 ರೂ.

ದಪ್ಪ ಮೆಣಸಿನಕಾಯಿ 70 ರೂ.

ಬದನೆಕಾಯಿ- 50 ರೂ.

ಹೀರೆಕಾಯಿ 70 ರೂ.

ಸೋರೆಕಾಯಿ 40 ರೂ.

ಟೊಮ್ಯಾಟೋ 40 ರೂ.

ಹಸಿ ಮೆಣಸಿನಕಾಯಿ 70 ರೂ.

ಬೀಟ್‌ರೂಟ್ 50 ರೂ.

ಗೆಡ್ಡೆ ಕೋಸು 50 ರೂ.

ಹೂ ಕೋಸು 50 ರೂ.

ಸೌತೇಕಾಯಿ 50 ರೂ.

ಹೀರೇಕಾಯಿ 70 ರೂ.

ಹಾಗಲಕಾಯಿ 50 ರೂ.

ಸೀಮೆ ಬದನೆ 25 ರೂ.

ಹೂಕೋಸು – 45.00

ಕೊತ್ತಂಬರಿ ಸೊಪ್ಪು – 20.00

ನುಗ್ಗೆಕಾಯಿ -70

andolana

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

2 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

2 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

2 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

2 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

3 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

3 hours ago