ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ : ಸಚಿವ ಎಸ್‌. ಟಿ. ಸೋಮಶೇಖರ್‌ ಅವರಿಂದ ಪೂರ್ವ ಸಿದ್ದತೆ ವೀಕ್ಷಣೆ

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು.
ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.
7ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು ಎಂದರು. ಇತರ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್ ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗುವುದು.

andolanait

Recent Posts

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

17 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

23 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

33 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

37 mins ago

ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…

40 mins ago

ಪ್ರಧಾನಿ ನರೇಂದ್ರ ಮೋದಿ ದೇಶವನ್ನೇ ಮಾಡಿದ್ದಾರೆ: ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ…

43 mins ago