ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ : ಸಚಿವ ಎಸ್‌. ಟಿ. ಸೋಮಶೇಖರ್‌ ಅವರಿಂದ ಪೂರ್ವ ಸಿದ್ದತೆ ವೀಕ್ಷಣೆ

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು.
ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.
7ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು ಎಂದರು. ಇತರ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್ ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗುವುದು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago