ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ : ಸಚಿವ ಎಸ್‌. ಟಿ. ಸೋಮಶೇಖರ್‌ ಅವರಿಂದ ಪೂರ್ವ ಸಿದ್ದತೆ ವೀಕ್ಷಣೆ

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು.
ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.
7ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು ಎಂದರು. ಇತರ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್ ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗುವುದು.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

6 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago