ಬೆಂಗಳೂರು: ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್ಆರ್ ಟಿಸಿಯಿಂದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಒದಗಿಸಲಾಗಿದೆ ಎಂದು ಸಾರಿಗೆ ಸಚಿವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎರಡನೆ ಟರ್ಮಿನಲ್ ನಿಂದ ನಿಗಮದ ಫ್ಲೈಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಫ್ಲೈಬಸ್ ಪ್ರತಿಷ್ಠಿತ ವಾಹನಗಳಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಯವು ಪ್ರಾಮುಖವಾದ ಕಾರಣ, ಹಾಗಾಗಿ ಫ್ಲೈ ಬಸ್ಗಳಲ್ಲಿ ನಿರ್ದಿಷ್ಟ ನಿಲುಗಡೆಗಳು ಮಾತ್ರ ಇರುತ್ತವೆ ಎಂದರು.
ಪ್ರಯಾಣಿಕರು ಮೈಸೂರು ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಇತರೆ ವಾಹನದಲ್ಲಿ ಪ್ರಯಾಣಿಸಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಬಿಎಂಟಿಸಿ ಬಸ್ ಅಥವಾ ವೋಲಾ, ಉಬರ್ ಬಳಸಿದಲ್ಲಿ ಪ್ರತ್ಯೇಕ ಪ್ರಯಾಣದರ ಪಾವತಿಸಿ, ದುಪ್ಪಟ್ಟುದರದೊಂದಿಗೆ ಪ್ರಯಾಣಿಸಬೇಕಾಗಿರುತ್ತದೆ. ಅಲ್ಲದೇ ಎರಡು ಸ್ಥಳಗಳಲ್ಲಿ ವಾಹನ ಬದಲಾವಣೆ ಮಾಡಬೇಕಾಗಿರುತ್ತದೆ. ಇದರಿಂದ ಪ್ರಯಾಣಿಕರಿಗೆ ಸಮಯದ, ಹಣದ ವ್ಯರ್ಥವಾಗುತ್ತದೆ ಎಂದರು.
ಫ್ಲೈ ಬಸ್ನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜೈವಿಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಹೆಚ್ಚಿನ ಲಗೇಜುಗಳನ್ನು ಕೊಂಡೊಯ್ಯುವುದರಿಂದ ಪ್ರಯಾಣಿಕರುಕೊಂಡೊಯ್ಯುವ ಸ್ವಂತ ಲಗೇಜುಗಳಿಗೆ ಯಾವುದೇ ಮಿತಿ ಇರುವುದಿಲ್ಲ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಹಿರಿಯ ಅಧಿಕಾರಿ ಜಿ.ಸತ್ಯವತಿ ಸೇರಿದಂತೆ ಮತ್ತಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…