ಬೆಂಗಳೂರು: ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್ಆರ್ ಟಿಸಿಯಿಂದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಒದಗಿಸಲಾಗಿದೆ ಎಂದು ಸಾರಿಗೆ ಸಚಿವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎರಡನೆ ಟರ್ಮಿನಲ್ ನಿಂದ ನಿಗಮದ ಫ್ಲೈಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಫ್ಲೈಬಸ್ ಪ್ರತಿಷ್ಠಿತ ವಾಹನಗಳಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಯವು ಪ್ರಾಮುಖವಾದ ಕಾರಣ, ಹಾಗಾಗಿ ಫ್ಲೈ ಬಸ್ಗಳಲ್ಲಿ ನಿರ್ದಿಷ್ಟ ನಿಲುಗಡೆಗಳು ಮಾತ್ರ ಇರುತ್ತವೆ ಎಂದರು.
ಪ್ರಯಾಣಿಕರು ಮೈಸೂರು ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಇತರೆ ವಾಹನದಲ್ಲಿ ಪ್ರಯಾಣಿಸಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಬಿಎಂಟಿಸಿ ಬಸ್ ಅಥವಾ ವೋಲಾ, ಉಬರ್ ಬಳಸಿದಲ್ಲಿ ಪ್ರತ್ಯೇಕ ಪ್ರಯಾಣದರ ಪಾವತಿಸಿ, ದುಪ್ಪಟ್ಟುದರದೊಂದಿಗೆ ಪ್ರಯಾಣಿಸಬೇಕಾಗಿರುತ್ತದೆ. ಅಲ್ಲದೇ ಎರಡು ಸ್ಥಳಗಳಲ್ಲಿ ವಾಹನ ಬದಲಾವಣೆ ಮಾಡಬೇಕಾಗಿರುತ್ತದೆ. ಇದರಿಂದ ಪ್ರಯಾಣಿಕರಿಗೆ ಸಮಯದ, ಹಣದ ವ್ಯರ್ಥವಾಗುತ್ತದೆ ಎಂದರು.
ಫ್ಲೈ ಬಸ್ನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜೈವಿಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಹೆಚ್ಚಿನ ಲಗೇಜುಗಳನ್ನು ಕೊಂಡೊಯ್ಯುವುದರಿಂದ ಪ್ರಯಾಣಿಕರುಕೊಂಡೊಯ್ಯುವ ಸ್ವಂತ ಲಗೇಜುಗಳಿಗೆ ಯಾವುದೇ ಮಿತಿ ಇರುವುದಿಲ್ಲ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಹಿರಿಯ ಅಧಿಕಾರಿ ಜಿ.ಸತ್ಯವತಿ ಸೇರಿದಂತೆ ಮತ್ತಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…