ಬೆಂಗಳೂರು: ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್ಆರ್ ಟಿಸಿಯಿಂದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಒದಗಿಸಲಾಗಿದೆ ಎಂದು ಸಾರಿಗೆ ಸಚಿವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎರಡನೆ ಟರ್ಮಿನಲ್ ನಿಂದ ನಿಗಮದ ಫ್ಲೈಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಫ್ಲೈಬಸ್ ಪ್ರತಿಷ್ಠಿತ ವಾಹನಗಳಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಯವು ಪ್ರಾಮುಖವಾದ ಕಾರಣ, ಹಾಗಾಗಿ ಫ್ಲೈ ಬಸ್ಗಳಲ್ಲಿ ನಿರ್ದಿಷ್ಟ ನಿಲುಗಡೆಗಳು ಮಾತ್ರ ಇರುತ್ತವೆ ಎಂದರು.
ಪ್ರಯಾಣಿಕರು ಮೈಸೂರು ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಇತರೆ ವಾಹನದಲ್ಲಿ ಪ್ರಯಾಣಿಸಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಬಿಎಂಟಿಸಿ ಬಸ್ ಅಥವಾ ವೋಲಾ, ಉಬರ್ ಬಳಸಿದಲ್ಲಿ ಪ್ರತ್ಯೇಕ ಪ್ರಯಾಣದರ ಪಾವತಿಸಿ, ದುಪ್ಪಟ್ಟುದರದೊಂದಿಗೆ ಪ್ರಯಾಣಿಸಬೇಕಾಗಿರುತ್ತದೆ. ಅಲ್ಲದೇ ಎರಡು ಸ್ಥಳಗಳಲ್ಲಿ ವಾಹನ ಬದಲಾವಣೆ ಮಾಡಬೇಕಾಗಿರುತ್ತದೆ. ಇದರಿಂದ ಪ್ರಯಾಣಿಕರಿಗೆ ಸಮಯದ, ಹಣದ ವ್ಯರ್ಥವಾಗುತ್ತದೆ ಎಂದರು.
ಫ್ಲೈ ಬಸ್ನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜೈವಿಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಹೆಚ್ಚಿನ ಲಗೇಜುಗಳನ್ನು ಕೊಂಡೊಯ್ಯುವುದರಿಂದ ಪ್ರಯಾಣಿಕರುಕೊಂಡೊಯ್ಯುವ ಸ್ವಂತ ಲಗೇಜುಗಳಿಗೆ ಯಾವುದೇ ಮಿತಿ ಇರುವುದಿಲ್ಲ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಹಿರಿಯ ಅಧಿಕಾರಿ ಜಿ.ಸತ್ಯವತಿ ಸೇರಿದಂತೆ ಮತ್ತಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…