ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು..
ದಲಿತರು ಅವರ ಹಕ್ಕುಗಳನ್ನು ಅನುಭವಿಸುತ್ತಿದ್ದಾರೆ ಎಂದರೆ ಹಿಂದೆ ನಮ್ಮ ಪೂರ್ವಜರು ಹಾಕಿದ ಹೆಜ್ಜೆ.. ನಮ್ಮ ಛಲವಾದಿ ಬಂದುಗಳು ಈಗೇ ಮುಂದಿನ ದಿನಗಳಲ್ಲಿ ಸಹ ಒಗ್ಗಟ್ಟಾಗಿರಬೇಕು…ನಮ್ಮ ಜನಾಂಗದ ಜನ ಯಾವ ಪಕ್ಷಕ್ಕಾದರೂ ಹೋಗಲಿ ಆದ್ರೆ ಜನಾಂಗದ ಏಳ್ಗೆಗಾಗಿ ದುಡಿಯಬೇಕು. ಶೋಷಿತ ಜನಾಂಗಕ್ಕೆ ದುಡಿದ ಶಿವರಾಮ್ ರವರು ಶಕ್ತಿಯನ್ನು ಮೀರಿ ದುಡಿದಿದ್ದಾರೆ ಎಂದರು..
ಡಿ ವೈ ಎಸ್ ಪಿ ಹೆಚ್ ಕೆ ಮಹಾನಂದ್ ಮಾತನಾಡಿ ಛಲ ಮತ್ತು ವಾದ ಎರಡು ಇದ್ದಾಗ ಮಾತ್ರ ಬಲ ಸಾಧ್ಯ..ನಮ್ಮ ಸಂಘಟನೆಯಲ್ಲಿ ಎಡ ಬಲ ಎರಡು ಸಹ ಒಂದಾಗಬೇಕು. ಅಲ್ಲದೆ ಮಹಾನ್ ವ್ಯಕ್ತಿ ಗಳನ್ನು ಒಂದು ಸಮಾಜಕ್ಕೆ ಸೀಮಿತ ಮಾಡಬಾರದು.ಸಮಾನ ಮನಸ್ಕರಾದಾಗ ಮಾತ್ರ ಅಭಿವೃದ್ಧಿ ಸಾಧ್ಯ… ಬಾಬಾ ಸಾಹೇಬರು ಕೊಟ್ಟಂತಹ ಋಣದಿಂದ ಮಾತ್ರ ಇದು ಸಾದ್ಯ ಎಂದರು.
ಇದೆ ಸಂದರ್ಭದಲ್ಲಿ ಉಪ ನೊಂದಣಾಧಿಕಾರಿ ಶಿವಶಂಕರ ಮೂರ್ತಿ, ಗುತ್ತಿಗೆದಾರ ಓಲೆ ಮಹಾದೇವ, ರಾಜ್ಯ ಛಲವಾದಿ ಮಹಾಸಭಾದ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು, ಡಿ ದೇವರಾಜು, ಛಲವಾದಿ ಮಹಾಸಭಾದ ಕಾರ್ಯದರ್ಶಿ ಹಂಸರಾಜು, ಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ಕನಕರಾಜು, ಮಾದೇಶ್, ಗುಂಡಾಪುರ ಸೋಮಣ್ಣ, ಸುಶೀಲ, ಶಿವನಂಜಯ್ಯ, ಯಜಮಾನರಾದ ಸಿದ್ದರಾಜು, ಚಿಕ್ಕಣ್ಣ,ಇನ್ನಿತರರು ಉಪಸ್ಥಿತರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…