ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು..
ದಲಿತರು ಅವರ ಹಕ್ಕುಗಳನ್ನು ಅನುಭವಿಸುತ್ತಿದ್ದಾರೆ ಎಂದರೆ ಹಿಂದೆ ನಮ್ಮ ಪೂರ್ವಜರು ಹಾಕಿದ ಹೆಜ್ಜೆ.. ನಮ್ಮ ಛಲವಾದಿ ಬಂದುಗಳು ಈಗೇ ಮುಂದಿನ ದಿನಗಳಲ್ಲಿ ಸಹ ಒಗ್ಗಟ್ಟಾಗಿರಬೇಕು…ನಮ್ಮ ಜನಾಂಗದ ಜನ ಯಾವ ಪಕ್ಷಕ್ಕಾದರೂ ಹೋಗಲಿ ಆದ್ರೆ ಜನಾಂಗದ ಏಳ್ಗೆಗಾಗಿ ದುಡಿಯಬೇಕು. ಶೋಷಿತ ಜನಾಂಗಕ್ಕೆ ದುಡಿದ ಶಿವರಾಮ್ ರವರು ಶಕ್ತಿಯನ್ನು ಮೀರಿ ದುಡಿದಿದ್ದಾರೆ ಎಂದರು..
ಡಿ ವೈ ಎಸ್ ಪಿ ಹೆಚ್ ಕೆ ಮಹಾನಂದ್ ಮಾತನಾಡಿ ಛಲ ಮತ್ತು ವಾದ ಎರಡು ಇದ್ದಾಗ ಮಾತ್ರ ಬಲ ಸಾಧ್ಯ..ನಮ್ಮ ಸಂಘಟನೆಯಲ್ಲಿ ಎಡ ಬಲ ಎರಡು ಸಹ ಒಂದಾಗಬೇಕು. ಅಲ್ಲದೆ ಮಹಾನ್ ವ್ಯಕ್ತಿ ಗಳನ್ನು ಒಂದು ಸಮಾಜಕ್ಕೆ ಸೀಮಿತ ಮಾಡಬಾರದು.ಸಮಾನ ಮನಸ್ಕರಾದಾಗ ಮಾತ್ರ ಅಭಿವೃದ್ಧಿ ಸಾಧ್ಯ… ಬಾಬಾ ಸಾಹೇಬರು ಕೊಟ್ಟಂತಹ ಋಣದಿಂದ ಮಾತ್ರ ಇದು ಸಾದ್ಯ ಎಂದರು.
ಇದೆ ಸಂದರ್ಭದಲ್ಲಿ ಉಪ ನೊಂದಣಾಧಿಕಾರಿ ಶಿವಶಂಕರ ಮೂರ್ತಿ, ಗುತ್ತಿಗೆದಾರ ಓಲೆ ಮಹಾದೇವ, ರಾಜ್ಯ ಛಲವಾದಿ ಮಹಾಸಭಾದ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು, ಡಿ ದೇವರಾಜು, ಛಲವಾದಿ ಮಹಾಸಭಾದ ಕಾರ್ಯದರ್ಶಿ ಹಂಸರಾಜು, ಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ಕನಕರಾಜು, ಮಾದೇಶ್, ಗುಂಡಾಪುರ ಸೋಮಣ್ಣ, ಸುಶೀಲ, ಶಿವನಂಜಯ್ಯ, ಯಜಮಾನರಾದ ಸಿದ್ದರಾಜು, ಚಿಕ್ಕಣ್ಣ,ಇನ್ನಿತರರು ಉಪಸ್ಥಿತರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…