ಜಿಲ್ಲೆಗಳು

ಜಾನಪದ ಹಾಡುಗಾರ್ತಿ ಭಾಗ್ಯಮ್ಮ ನಿಧನ

ಮೈಸೂರು: ಮೈಸೂರು ಸೀಮೆಯ ಅನುಪಮ ಜಾನಪದ ಹಾಡುಗಾರ್ತಿ ಮಾರಗೌಡನಹಳ್ಳಿ ಭಾಗ್ಯಮ್ಮ ಸೋಮೇಗೌಡ (೬೫) ಅವರು ಮಂಗಳವಾರ ರಾತ್ರಿ ನಿಧನರಾದರು.
ಮೃತರು ಪತಿ ಸೋಮೇಗೌಡ, ಒಬ್ಬ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಬುಧವಾರ ಭಾಗ್ಯಮ್ಮ ಪಾರ್ಥೀವ ಶರೀರದ ಅಂತ್ಯಕ್ರಿಯೆ ಅವರ ಜಮೀನಿನಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೈಸೂರು ಆಕಾಶವಾಣಿಯ ಉನ್ನತ ಶ್ರೇಣಿಯ ಜಾನಪದ ಕಲಾವಿದೆಯಾಗಿದ್ದ ಅವರು ಹಲವು ಸನ್ಮಾನ ಹಾಗೂ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ತಮ್ಮ ತಂಡದೊಡನೆ ತತ್ವಪದ, ಸೋಬಾನೆ ಪದ, ರಾಗಿ ಬೀಸೋ ಹಾಡು, ಹಸೆ ಹಾಡುಗಳನ್ನು ಹೇಳುತ್ತಾ ಸುತ್ತಲಿನ ಹತ್ತು ಸೀಮೆಗಳಲ್ಲೂ ಖ್ಯಾತರಾಗಿದ್ದ ಭಾಗ್ಯಮ್ಮನವರು ಸುತ್ತೂರು ಜಾತ್ರೆಯಲ್ಲಿ ಹಾಡಲು ತಮ್ಮ ತಂಡವನ್ನು ಸಿದ್ಧಗೊಳಿಸುತ್ತಿರುವಾಗಲೇ ಹಠಾತ್ ಅಸ್ವಸ್ಥಗೊಂಡು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಮೃತಪಟ್ಟರು.
ಮಾರಗೌಡನಹಳ್ಳಿಯ ಒಕ್ಕಲುಗೇರಿಯ ನಿವಾಸಿಯಾಗಿದ್ದ ಭಾಗ್ಯಮ್ಮನವರು ಅದೇ ಊರಿನ ದಲಿತರ ಕೇರಿಯ ದೇವಮ್ಮನವರ ಜೊತೆ ಕಳೆದ 50 ವರ್ಷಗಳಿಂದ ಹಾಡುತ್ತಿದ್ದರು. ಜಾತಿ ಅಂತಸ್ತುಗಳನ್ನ ಮೀರಿದ ಇವರಿಬ್ಬರ ಸ್ನೇಹದ ಕಥೆ ಈ ಹಿಂದೆ ಆಂದೋಲನ ಹಾಡು ಪಾಡುವಿನಲ್ಲಿ ಪ್ರಕಟವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

17 hours ago