ಹನೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಈ ಪೈಕಿ ಒಬ್ಬರು ನಮ್ಮ ಕ್ಷೇತ್ರದವರು ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತಿದೆ, ಅವರಿಗೆ ಸಿಕ್ಕಿರುವ ಪ್ರಶಸ್ತಿ ತಾಲ್ಲೂಕಿನ ಸಂದ ಗೌರವವಾಗಿದೆ ಎಂದು ಶಾಸಕ ಆರ್. ನರೇಂದ್ರ ಶ್ಲಾಘಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆಗದ್ದೆ ಮಾದಮ್ಮ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಜಾನಪದ ಕಲಾವಿದರ ನೆಲೆ ಎಂದೇ ಖ್ಯಾತಿ ಗಳಿಸಿರುವ ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಇಬ್ಬರಿಗೆ ರಾಜ್ಯ ಸರ್ಕಾರ ಗುರುತಿಸಿ ಸನ್ಮಾನಿಸಿರುವುದು ಸಂತಸದ ವಿಚಾರ. ಚಿತ್ರನಟ ಪುನಿತ್ ರಾಜ್ ಕುಮಾರ್ ಸಾಯುವವರೆಗೂ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳು ಬೆಳಕಿಗೆ ಬಂದಿರಲಿಲ್ಲ. ರಾಜ್ಯದ ಎಲ್ಲೆಯನ್ನು ದಾಟಿ ಅವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಬದುಕಿದ್ದಾಗ ಮಹಾನ್ ಮಾನವಾತವಾದ ಕೆಲಸ ಮಾಡುವುದರ ಮೂಲಕ ಎಲೆಮರೆ ಕಾಯಿಯಂತಿದ್ದ ಪುನಿತ್ ರಾಜ್ ಕುಮಾರ್ ಸತ್ತಮೇಲೂ ಅಂಗಾಂಗಗಳನ್ನು ದಾನ ಮಾಡುವ ಮೂಲಕ ರಾಜ್ಯದ ಯುವಕರಿಗೆ ಮಾದರಿಯಾಗಿದ್ದಾರೆ. ಇವರ ಪ್ರೇರಣೆಯಿಂದಾಗಿ 85 ಸಾವಿರಕ್ಕೂ ಹೆಚ್ಚು ಜನ ನೇತ್ರದಾನ ಹಾಗೂ 600 ಜನ ಅಂಗಾಂಗ ದಾನಕ್ಕೆ ನೋಂದಣಿ ಮಾಡಿದ್ದಾರೆ. ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಇಂದಿನ ದಿನಗಳಲ್ಲಿ ಪ್ರತಿ ಅಂಗಾಂಗಳಿಗೂ ಒಬ್ಬೊಬ್ಬ ವೈದ್ಯರಿದ್ದಾರೆ. ಆದರೆ ಕಳೆದ ಐದಾರು ದಶಕಗಳಿಂದಲೂ ಎಲ್ಲಾ ರೋಗಗಳಿಗೂ ಔಷಧಿ ನೀಡುವ ಮೂಲಕ ಜನ್ನಣೆ ಗಳಿಸಿರುವ ಜೀರಿಗೆಗದ್ದೆ ಮಾದಮ್ಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಬಾಜನರಾಗಿರುವುದು ಶ್ಲಾಘನೀಯ ವಿಚಾರ ಮುಂದಿನ ದಿನಗಳಲ್ಲಿ ಅವರ ಸೇವೆ ಮತ್ತಷ್ಟು ಜನರಿಗೆ ಸಿಗುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ ಇಒ ಶ್ರೀನಿವಾಸ್ ,ಮುಖ್ಯಾಧಿಕಾರಿ ಮೂರ್ತಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್,ಉಪನೋಂದಣಾಧಿಕಾರಿ ಉಷಾ, ಸೆಸ್ಕ್ ಕಿರಿಯ ಅಭಿಯಂತರ ರಂಗಸ್ವಾಮಿ, ಕಂದಾಯ ನಿರೀಕ್ಷಕರು ಗಳಾದ ಬಿ ಪಿ ಮಾದೇಶ್,ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಮುಖಂಡರುಗಳಾದ ಅಜ್ಜೀಪುರ ನಾಗರಾಜು ಜೀರಿಗೆಗದ್ದೆ ಚಂದ್ರು ಜಲ್ಲಿಪಾಳ್ಯ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…
ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…
ಜಿ.ಎಲ್.ತ್ರಿಪುರಾಂತಕ ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…