ಹನೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಈ ಪೈಕಿ ಒಬ್ಬರು ನಮ್ಮ ಕ್ಷೇತ್ರದವರು ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತಿದೆ, ಅವರಿಗೆ ಸಿಕ್ಕಿರುವ ಪ್ರಶಸ್ತಿ ತಾಲ್ಲೂಕಿನ ಸಂದ ಗೌರವವಾಗಿದೆ ಎಂದು ಶಾಸಕ ಆರ್. ನರೇಂದ್ರ ಶ್ಲಾಘಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆಗದ್ದೆ ಮಾದಮ್ಮ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಜಾನಪದ ಕಲಾವಿದರ ನೆಲೆ ಎಂದೇ ಖ್ಯಾತಿ ಗಳಿಸಿರುವ ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಇಬ್ಬರಿಗೆ ರಾಜ್ಯ ಸರ್ಕಾರ ಗುರುತಿಸಿ ಸನ್ಮಾನಿಸಿರುವುದು ಸಂತಸದ ವಿಚಾರ. ಚಿತ್ರನಟ ಪುನಿತ್ ರಾಜ್ ಕುಮಾರ್ ಸಾಯುವವರೆಗೂ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳು ಬೆಳಕಿಗೆ ಬಂದಿರಲಿಲ್ಲ. ರಾಜ್ಯದ ಎಲ್ಲೆಯನ್ನು ದಾಟಿ ಅವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಬದುಕಿದ್ದಾಗ ಮಹಾನ್ ಮಾನವಾತವಾದ ಕೆಲಸ ಮಾಡುವುದರ ಮೂಲಕ ಎಲೆಮರೆ ಕಾಯಿಯಂತಿದ್ದ ಪುನಿತ್ ರಾಜ್ ಕುಮಾರ್ ಸತ್ತಮೇಲೂ ಅಂಗಾಂಗಗಳನ್ನು ದಾನ ಮಾಡುವ ಮೂಲಕ ರಾಜ್ಯದ ಯುವಕರಿಗೆ ಮಾದರಿಯಾಗಿದ್ದಾರೆ. ಇವರ ಪ್ರೇರಣೆಯಿಂದಾಗಿ 85 ಸಾವಿರಕ್ಕೂ ಹೆಚ್ಚು ಜನ ನೇತ್ರದಾನ ಹಾಗೂ 600 ಜನ ಅಂಗಾಂಗ ದಾನಕ್ಕೆ ನೋಂದಣಿ ಮಾಡಿದ್ದಾರೆ. ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಇಂದಿನ ದಿನಗಳಲ್ಲಿ ಪ್ರತಿ ಅಂಗಾಂಗಳಿಗೂ ಒಬ್ಬೊಬ್ಬ ವೈದ್ಯರಿದ್ದಾರೆ. ಆದರೆ ಕಳೆದ ಐದಾರು ದಶಕಗಳಿಂದಲೂ ಎಲ್ಲಾ ರೋಗಗಳಿಗೂ ಔಷಧಿ ನೀಡುವ ಮೂಲಕ ಜನ್ನಣೆ ಗಳಿಸಿರುವ ಜೀರಿಗೆಗದ್ದೆ ಮಾದಮ್ಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಬಾಜನರಾಗಿರುವುದು ಶ್ಲಾಘನೀಯ ವಿಚಾರ ಮುಂದಿನ ದಿನಗಳಲ್ಲಿ ಅವರ ಸೇವೆ ಮತ್ತಷ್ಟು ಜನರಿಗೆ ಸಿಗುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ ಇಒ ಶ್ರೀನಿವಾಸ್ ,ಮುಖ್ಯಾಧಿಕಾರಿ ಮೂರ್ತಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್,ಉಪನೋಂದಣಾಧಿಕಾರಿ ಉಷಾ, ಸೆಸ್ಕ್ ಕಿರಿಯ ಅಭಿಯಂತರ ರಂಗಸ್ವಾಮಿ, ಕಂದಾಯ ನಿರೀಕ್ಷಕರು ಗಳಾದ ಬಿ ಪಿ ಮಾದೇಶ್,ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಮುಖಂಡರುಗಳಾದ ಅಜ್ಜೀಪುರ ನಾಗರಾಜು ಜೀರಿಗೆಗದ್ದೆ ಚಂದ್ರು ಜಲ್ಲಿಪಾಳ್ಯ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…