ಜಿಲ್ಲೆಗಳು

ಜಾನಪದ ತವರಿನ ಇಬ್ಬರಿಗೆ ರಾಜ್ಯದ ಗೌರವ ಸಿಕ್ಕಿರುವುದು ಶ್ಲಾಘನೀಯ : ಶಾಸಕ ಆರ್. ನರೇಂದ್ರ

ಹನೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಈ ಪೈಕಿ ಒಬ್ಬರು ನಮ್ಮ ಕ್ಷೇತ್ರದವರು ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತಿದೆ, ಅವರಿಗೆ ಸಿಕ್ಕಿರುವ ಪ್ರಶಸ್ತಿ ತಾಲ್ಲೂಕಿನ ಸಂದ ಗೌರವವಾಗಿದೆ ಎಂದು ಶಾಸಕ ಆರ್. ನರೇಂದ್ರ ಶ್ಲಾಘಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆಗದ್ದೆ ಮಾದಮ್ಮ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಜಾನಪದ ಕಲಾವಿದರ ನೆಲೆ ಎಂದೇ ಖ್ಯಾತಿ ಗಳಿಸಿರುವ ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಇಬ್ಬರಿಗೆ ರಾಜ್ಯ ಸರ್ಕಾರ ಗುರುತಿಸಿ ಸನ್ಮಾನಿಸಿರುವುದು ಸಂತಸದ ವಿಚಾರ. ಚಿತ್ರನಟ ಪುನಿತ್ ರಾಜ್ ಕುಮಾರ್ ಸಾಯುವವರೆಗೂ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳು ಬೆಳಕಿಗೆ ಬಂದಿರಲಿಲ್ಲ. ರಾಜ್ಯದ ಎಲ್ಲೆಯನ್ನು ದಾಟಿ ಅವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಬದುಕಿದ್ದಾಗ ಮಹಾನ್ ಮಾನವಾತವಾದ ಕೆಲಸ ಮಾಡುವುದರ ಮೂಲಕ ಎಲೆಮರೆ ಕಾಯಿಯಂತಿದ್ದ ಪುನಿತ್ ರಾಜ್ ಕುಮಾರ್ ಸತ್ತಮೇಲೂ ಅಂಗಾಂಗಗಳನ್ನು ದಾನ ಮಾಡುವ ಮೂಲಕ ರಾಜ್ಯದ ಯುವಕರಿಗೆ ಮಾದರಿಯಾಗಿದ್ದಾರೆ. ಇವರ ಪ್ರೇರಣೆಯಿಂದಾಗಿ 85 ಸಾವಿರಕ್ಕೂ ಹೆಚ್ಚು ಜನ ನೇತ್ರದಾನ ಹಾಗೂ 600 ಜನ ಅಂಗಾಂಗ ದಾನಕ್ಕೆ ನೋಂದಣಿ ಮಾಡಿದ್ದಾರೆ. ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಇಂದಿನ ದಿನಗಳಲ್ಲಿ ಪ್ರತಿ ಅಂಗಾಂಗಳಿಗೂ ಒಬ್ಬೊಬ್ಬ ವೈದ್ಯರಿದ್ದಾರೆ. ಆದರೆ ಕಳೆದ ಐದಾರು ದಶಕಗಳಿಂದಲೂ ಎಲ್ಲಾ ರೋಗಗಳಿಗೂ ಔಷಧಿ ನೀಡುವ ಮೂಲಕ ಜನ್ನಣೆ ಗಳಿಸಿರುವ ಜೀರಿಗೆಗದ್ದೆ ಮಾದಮ್ಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಬಾಜನರಾಗಿರುವುದು ಶ್ಲಾಘನೀಯ ವಿಚಾರ ಮುಂದಿನ ದಿನಗಳಲ್ಲಿ ಅವರ ಸೇವೆ ಮತ್ತಷ್ಟು ಜನರಿಗೆ ಸಿಗುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ ಇಒ ಶ್ರೀನಿವಾಸ್ ,ಮುಖ್ಯಾಧಿಕಾರಿ ಮೂರ್ತಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್,ಉಪನೋಂದಣಾಧಿಕಾರಿ ಉಷಾ, ಸೆಸ್ಕ್ ಕಿರಿಯ ಅಭಿಯಂತರ ರಂಗಸ್ವಾಮಿ, ಕಂದಾಯ ನಿರೀಕ್ಷಕರು ಗಳಾದ ಬಿ ಪಿ ಮಾದೇಶ್,ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಮುಖಂಡರುಗಳಾದ ಅಜ್ಜೀಪುರ ನಾಗರಾಜು ಜೀರಿಗೆಗದ್ದೆ ಚಂದ್ರು ಜಲ್ಲಿಪಾಳ್ಯ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 mins ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

6 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

7 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

7 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

7 hours ago