ಜಿಲ್ಲೆಗಳು

ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸಂಪೂರ್ಣ ಕಡೆಗಣನೆ: ವಿಶ್ವನಾಥ್ ವಾಗ್ದಾಳಿ

‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಕಡೆಗಣಿಸಿ ಉಳ್ಳವರ ಪರವಾಗಿ ನಿಲ್ಲುತ್ತಿದೆ’

ಮೈಸೂರು: ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸುಭಿಕ್ಷವಾಗಿದ್ದಾಗ ದೇಶ ಅಭಿವೃದ್ಧಿಯಾಗುತ್ತದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಕ್ಷೇತ್ರಗಳನ್ನು ಕಡೆಗಣಿಸಿ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಬಜೆಟ್ ಮಂಡಿಸಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಈ ಕ್ಷೇತ್ರಗಳಿಗೆ ಅನುದಾನ ಕಡಿಮೆ ಮಾಡುತ್ತಾ ಬಂದಿದೆ. ಮೋದಿ ಪ್ರಧಾನಿ ಆದ ಮೇಲೆ ಅಲ್ಪಸಂಖ್ಯಾತ ಶಾಲೆಗಳಿಗೆ ಅನುದಾನ ಸಿಗುತ್ತಿಲ್ಲ. ಇದು ಅಲ್ಪಸಂಖ್ಯಾತರು ಮಾತ್ರವಲ್ಲದೆ ಭಾರತದ ಅಭಿವೃದ್ಧಿಗೂ ಹೊಡೆತ ನೀಡುತ್ತಿದೆ. ನಮಗೆ ಬೇಕಿರುವುದು ಮೂಲ ಸೌಲಭ್ಯವೇ ಹೊರತು, ವಿಮಾನ ನಿಲ್ದಾಣಗಳಲ್ಲ. ಕಳೆದ  5 ವರ್ಷಗಳಲ್ಲಿ ದೇಶದ ಅಭಿವೃದ್ಧಿ ದರ ಕಡಿಮೆಯಾಗುತ್ತಲೆ ಇದೆ. ಜನಸಾಮಾನ್ಯರನ್ನು ಕಡೆಗಣಿಸಿರುವ ಸರ್ಕಾರ ಉಳ್ಳವರ ಪರವಾಗಿ ನಿಲ್ಲುತ್ತಿದೆ. ಇದೇನಾ ನಿಮ್ಮ ಅಭಿವೃದ್ಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಏಕೆ ಸುಮ್ಮನಿದ್ದೀರಿ?: 305 ಕೋಟಿ ರೂ. ಲಾಭದಲ್ಲಿರುವ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಸರ್ಕಾರ ಹೊರಟಿದೆ. ಕಾರ್ಖಾನೆಯಲ್ಲಿ ಈಗಲೂ 220 ಖಾಯಂ ನೌಕರರಿದ್ದು, ಸಾವಿರಾರು ಮಂದಿ ಅರೆಕಾಲಿಕ ನೌಕರರು ದುಡಿಯುತ್ತಿದ್ದಾರೆ. ಹೀಗಿದ್ದರೂ ಮುಚ್ಚಲು ಹೊರಟಿರುವುದು ಏಕೆ? ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿ.ವೈ. ವಿಜೆಯೇಂದ್ರ ಏನು ಮಾಡುತ್ತಿದ್ದಾರೆ? ನೀವೇನಾದರೂ ಭೂಮಿ ಲಪಟಾಯಿಸಲು ನೋಡುತ್ತಿದ್ದೀರಾ? ಸರ್ಕಾರಿ ಭೂಮಿ ಲಪಟಾಯಿಸುವುದರಲ್ಲಿ ನೀವು ನಿಸ್ಸೀಮರು. ಮೋದಿ ಹಾಗೂ ಅಮಿತ್ ಶಾ ಸೇರಿಕೊಂಡು ಕರ್ನಾಟಕದ ಎಲ್ಲ ಆಸ್ತಿಗಳನ್ನು ಒಂದೊಂದಾಗಿ ಗುಜರಾತ್‌ನ ಮಾರ್ವಾಡಿಗಳಿಗೆ ಕೊಡುತ್ತಿದ್ದಾರೆ. ಭದ್ರಾವತಿ ವಿಧಾನಸಭೆ ಕ್ಷೇತ್ರದಲ್ಲಿ ಇದುವರೆಗೂ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ಹಾಗಾಗಿ ಭದ್ರಾವತಿ ಕಂಡರೆ ಬಿಜೆಪಿಯವರಿಗೆ ಆಗುವುದಿಲ್ಲ. ಫೆ.27ಕ್ಕೆ ಶಿವಮೊಗ್ಗಕ್ಕೆ ಮೋದಿ ಬರುತ್ತಿದ್ದು, ಅಲ್ಲಿನ ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ ಒಂದೊಂದಾಗಿ ದೇಶದ ಕಾರ್ಖಾನೆಗಳನ್ನು ಮುಚ್ಚುತ್ತಿದ್ದಾರೆ. ಸೇಲಂನಲ್ಲಿ ಇದೇ ರೀತಿಯ ಕಾರ್ಖಾನೆ ಮುಚ್ಚಲು ಮುಂದಾದಾಗ ಅಲ್ಲಿನ ಜನತೆ, ಸಂಸದರು ತಿರುಗಿ ಬಿದ್ದಿದ್ದರಿಂದ ಕಾರ್ಖಾನೆ ಪುನಾರಂಭವಾಗಿದೆ. ಆ ತಾಕತ್ತು ನಮ್ಮ ಮುಖ್ಯಮಂತ್ರಿ, ಸಂಸದರಿಗೆ ಯಾಕಿಲ್ಲ ಎಂದು ಪ್ರಶ್ನಿಸಿದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

51 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago