ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ದಿನಾಂಕ 15/10/2022 ರಂದು ರಾತ್ರಿ ಒಟ್ಟು 9 ಜನ ಆರೋಪಿಗಳು ಸೇರಿ ಕಾಟಿಯನ್ನು ಭೇಟೆಯಾಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು ಕಾರ್ಯಾಚರಣೆಯನ್ನು ಕೈಗೊಂಡ ಅಧಿಕಾರಿಗಳಾದ ಉಪಾರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್ ದಯಾನಂದ ಅವರ ಮಾರ್ಗದರ್ಶನದೊಂದಿಗೆ ಹುಣಸೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಹಾಗೂ ಆನೆ ಚೌಕೂರು ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳಾದ ಗಣರಾಜ ಪಟಗಾರ ಹಾಗೂ ಹುಣಸೂರು ವನ್ಯಜೀವಿ ವಲಯದ ಸಿಬ್ಬಂದಿಗಳು ವಿಶೇಷ ಹುಲಿ ಸಂರಕ್ಷಣಾ ಪಡೆಯ ಸಿಬ್ಬಂದಿಗಳೊಂದಿಗೆ ತನಿಖೆ ಕೈಗೊಂಡು ಘಟನೆಯ ಸಂಬಂಧ ಇಬ್ಬರು ಆರೋಪಿಗಳಾದ ಚಂದ್ರ ಅಲಿಯಾಸ್ ಕಾಟಿ ಚಂದ್ರ, ಅಶೋಕ್ ಲಕ್ಷಮೀಪುರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಉಳಿದ 7 ಜನ ಆರೋಪಿಗಳಾದ ಮನು,ಬೊಮ್ಮ, ಭರತ್, ಆನಂದ್, ಶೇಷಮ್ಮನ ಜಯ, ರಾಮಕೃಷ್ಣೆಗೌಡ, ಮಂಜು ಇವರುಗಳನ್ನು ಬಂಧಿಸಲು ಪ್ರಯತ್ನದಲ್ಲಿ ತೊಡಗಿದ್ದಾರೆ.
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…