ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ದಿನಾಂಕ 15/10/2022 ರಂದು ರಾತ್ರಿ ಒಟ್ಟು 9 ಜನ ಆರೋಪಿಗಳು ಸೇರಿ ಕಾಟಿಯನ್ನು ಭೇಟೆಯಾಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು ಕಾರ್ಯಾಚರಣೆಯನ್ನು ಕೈಗೊಂಡ ಅಧಿಕಾರಿಗಳಾದ ಉಪಾರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್ ದಯಾನಂದ ಅವರ ಮಾರ್ಗದರ್ಶನದೊಂದಿಗೆ ಹುಣಸೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಹಾಗೂ ಆನೆ ಚೌಕೂರು ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳಾದ ಗಣರಾಜ ಪಟಗಾರ ಹಾಗೂ ಹುಣಸೂರು ವನ್ಯಜೀವಿ ವಲಯದ ಸಿಬ್ಬಂದಿಗಳು ವಿಶೇಷ ಹುಲಿ ಸಂರಕ್ಷಣಾ ಪಡೆಯ ಸಿಬ್ಬಂದಿಗಳೊಂದಿಗೆ ತನಿಖೆ ಕೈಗೊಂಡು ಘಟನೆಯ ಸಂಬಂಧ ಇಬ್ಬರು ಆರೋಪಿಗಳಾದ ಚಂದ್ರ ಅಲಿಯಾಸ್ ಕಾಟಿ ಚಂದ್ರ, ಅಶೋಕ್ ಲಕ್ಷಮೀಪುರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಉಳಿದ 7 ಜನ ಆರೋಪಿಗಳಾದ ಮನು,ಬೊಮ್ಮ, ಭರತ್, ಆನಂದ್, ಶೇಷಮ್ಮನ ಜಯ, ರಾಮಕೃಷ್ಣೆಗೌಡ, ಮಂಜು ಇವರುಗಳನ್ನು ಬಂಧಿಸಲು ಪ್ರಯತ್ನದಲ್ಲಿ ತೊಡಗಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…