ಜಿಲ್ಲೆಗಳು

ಡಾ.ಹೆಚ್‌ಸಿಎಂಗೆ ಟಿಕೆಟ್ ನೀಡಲು ಒತ್ತಾಯ

ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದಾಗ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಪ್ರತಿ ಗ್ರಾಮಗಳಿಗೂ ಕಾಂಕ್ರೀಟ್ ರಸ್ತೆ, 123 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ರೈತರ ಪರವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಸಮಿಶ್ರ ಸರ್ಕಾರ ಇದ್ದಾಗ ನುಗು ಏತ ನೀರಾವರಿ ಯೋಜನೆಗೆ 80 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅವರೇ ಮೊದಲು ಕಾರಣ. ವೀರಶೈವ ಸಮುದಾಯ ನಿರ್ಮಾಣಕ್ಕೆ ಜಾಗ ಹಾಗೂ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಎಲ್ಲಾ ಸಮುದಾಯದ ಜನರ ಜೊತೆ ಪ್ರೀತಿ ಗಳಿಸಿದ್ದಾರೆ. ಆದ್ದರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಗೆಲುವು ಖಚಿತವಾಗಿದ್ದು, ಅವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

10 mins ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

22 mins ago

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

32 mins ago

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

2 hours ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…

2 hours ago

ಕಾರ್ಮಿಕ ಸಂಹಿತೆ ವಾಪಸ್‌ಗೆ ಆಗ್ರಹಿಸಿ ಫೆ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…

2 hours ago