ಜಿಲ್ಲೆಗಳು

ಡಾ.ಹೆಚ್‌ಸಿಎಂಗೆ ಟಿಕೆಟ್ ನೀಡಲು ಒತ್ತಾಯ

ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದಾಗ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಪ್ರತಿ ಗ್ರಾಮಗಳಿಗೂ ಕಾಂಕ್ರೀಟ್ ರಸ್ತೆ, 123 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ರೈತರ ಪರವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಸಮಿಶ್ರ ಸರ್ಕಾರ ಇದ್ದಾಗ ನುಗು ಏತ ನೀರಾವರಿ ಯೋಜನೆಗೆ 80 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅವರೇ ಮೊದಲು ಕಾರಣ. ವೀರಶೈವ ಸಮುದಾಯ ನಿರ್ಮಾಣಕ್ಕೆ ಜಾಗ ಹಾಗೂ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಎಲ್ಲಾ ಸಮುದಾಯದ ಜನರ ಜೊತೆ ಪ್ರೀತಿ ಗಳಿಸಿದ್ದಾರೆ. ಆದ್ದರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಗೆಲುವು ಖಚಿತವಾಗಿದ್ದು, ಅವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago