ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು.
ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದರಿಂದ ಎರಡು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿರಿಸಲಾಗಿತ್ತು. ಅ.20ರ ಬೆಳಗ್ಗೆ ಮಾನವ ಅಂಗಾಂಗ ಕಸಿ ಕಾಯ್ದೆಯ ಪ್ರಕಾರ, ಆಸ್ಪತ್ರೆಯ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ನಂತರ ಹಲವಾರು ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂದು ಖಚಿತಪಡಿಸಲಾಗಿತ್ತು. ಮನೋಜ್ ಪೋಷಕರಾದ ಜಯಶಂಕರ್ ಮತ್ತು ಜಯಲಕ್ಷ್ಮಿ ಅವರಿಗೆ ಅಂಗಾಂಗ ದಾನದ ಬಗ್ಗೆ ಸಲಹೆ ನೀಡಿದಾಗ, ಪೋಷಕರು ಒಪ್ಪಿಗೆ ಸೂಚಿಸಿದ್ದರು.ಮನೋಜ್ ಅಂಗಗಳನ್ನು (ಹೃದಯ ಕವಾಟಗಳು, ಒಂದು ಮೂತ್ರಪಿಂಡ, ಯಕೃತ್ತು ಕಾರ್ನಿಯಾಗಳನ್ನು) ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಶ್ರೀ ಜಯದೇವ ಆಸ್ಪತ್ರೆ, ಲಿವರ್ ಹಾಗೂ ಬಲ ಕಿಡ್ನಿಯನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ, ಕಾರ್ನಿಯಾಗಳನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…