ಜಿಲ್ಲೆಗಳು

ಮೆದುಳು ನಿಷ್ಕ್ರಿಯ : ನಾಲ್ವರ ಬದುಕಿಗೆ ಬೆಳಕಾದ ಯುವಕ

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು.

ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದರಿಂದ ಎರಡು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿರಿಸಲಾಗಿತ್ತು. ಅ.20ರ ಬೆಳಗ್ಗೆ ಮಾನವ ಅಂಗಾಂಗ ಕಸಿ ಕಾಯ್ದೆಯ ಪ್ರಕಾರ, ಆಸ್ಪತ್ರೆಯ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ನಂತರ ಹಲವಾರು ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂದು ಖಚಿತಪಡಿಸಲಾಗಿತ್ತು. ಮನೋಜ್ ಪೋಷಕರಾದ ಜಯಶಂಕರ್ ಮತ್ತು ಜಯಲಕ್ಷ್ಮಿ ಅವರಿಗೆ ಅಂಗಾಂಗ ದಾನದ ಬಗ್ಗೆ ಸಲಹೆ ನೀಡಿದಾಗ, ಪೋಷಕರು ಒಪ್ಪಿಗೆ ಸೂಚಿಸಿದ್ದರು.ಮನೋಜ್ ಅಂಗಗಳನ್ನು (ಹೃದಯ ಕವಾಟಗಳು, ಒಂದು ಮೂತ್ರಪಿಂಡ, ಯಕೃತ್ತು ಕಾರ್ನಿಯಾಗಳನ್ನು) ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಶ್ರೀ ಜಯದೇವ ಆಸ್ಪತ್ರೆ, ಲಿವರ್ ಹಾಗೂ ಬಲ ಕಿಡ್ನಿಯನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ, ಕಾರ್ನಿಯಾಗಳನ್ನು ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

andolanait

Recent Posts

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

49 mins ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

58 mins ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

1 hour ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

1 hour ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

1 hour ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

2 hours ago