ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು.
ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದರಿಂದ ಎರಡು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿರಿಸಲಾಗಿತ್ತು. ಅ.20ರ ಬೆಳಗ್ಗೆ ಮಾನವ ಅಂಗಾಂಗ ಕಸಿ ಕಾಯ್ದೆಯ ಪ್ರಕಾರ, ಆಸ್ಪತ್ರೆಯ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ನಂತರ ಹಲವಾರು ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂದು ಖಚಿತಪಡಿಸಲಾಗಿತ್ತು. ಮನೋಜ್ ಪೋಷಕರಾದ ಜಯಶಂಕರ್ ಮತ್ತು ಜಯಲಕ್ಷ್ಮಿ ಅವರಿಗೆ ಅಂಗಾಂಗ ದಾನದ ಬಗ್ಗೆ ಸಲಹೆ ನೀಡಿದಾಗ, ಪೋಷಕರು ಒಪ್ಪಿಗೆ ಸೂಚಿಸಿದ್ದರು.ಮನೋಜ್ ಅಂಗಗಳನ್ನು (ಹೃದಯ ಕವಾಟಗಳು, ಒಂದು ಮೂತ್ರಪಿಂಡ, ಯಕೃತ್ತು ಕಾರ್ನಿಯಾಗಳನ್ನು) ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಶ್ರೀ ಜಯದೇವ ಆಸ್ಪತ್ರೆ, ಲಿವರ್ ಹಾಗೂ ಬಲ ಕಿಡ್ನಿಯನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ, ಕಾರ್ನಿಯಾಗಳನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…