ಜಿಲ್ಲೆಗಳು

ಮೆದುಳು ನಿಷ್ಕ್ರಿಯ : ನಾಲ್ವರ ಬದುಕಿಗೆ ಬೆಳಕಾದ ಯುವಕ

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು.

ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದರಿಂದ ಎರಡು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿರಿಸಲಾಗಿತ್ತು. ಅ.20ರ ಬೆಳಗ್ಗೆ ಮಾನವ ಅಂಗಾಂಗ ಕಸಿ ಕಾಯ್ದೆಯ ಪ್ರಕಾರ, ಆಸ್ಪತ್ರೆಯ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ನಂತರ ಹಲವಾರು ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂದು ಖಚಿತಪಡಿಸಲಾಗಿತ್ತು. ಮನೋಜ್ ಪೋಷಕರಾದ ಜಯಶಂಕರ್ ಮತ್ತು ಜಯಲಕ್ಷ್ಮಿ ಅವರಿಗೆ ಅಂಗಾಂಗ ದಾನದ ಬಗ್ಗೆ ಸಲಹೆ ನೀಡಿದಾಗ, ಪೋಷಕರು ಒಪ್ಪಿಗೆ ಸೂಚಿಸಿದ್ದರು.ಮನೋಜ್ ಅಂಗಗಳನ್ನು (ಹೃದಯ ಕವಾಟಗಳು, ಒಂದು ಮೂತ್ರಪಿಂಡ, ಯಕೃತ್ತು ಕಾರ್ನಿಯಾಗಳನ್ನು) ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಶ್ರೀ ಜಯದೇವ ಆಸ್ಪತ್ರೆ, ಲಿವರ್ ಹಾಗೂ ಬಲ ಕಿಡ್ನಿಯನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ, ಕಾರ್ನಿಯಾಗಳನ್ನು ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

andolanait

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

21 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago