ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ.
ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಬಾಲಂಬಿ ಗ್ರಾಮ, ಎಂ.ಚೆಂಬು ನಿವಾಸಿ ಜೇಮ್ಸ್ ಜೋಸೆಫ್(೨೪) ಎಂಬುವವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ೪ ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಶ್ರೀನಾಥ್, ಮುಂಗಡವಾಗಿ ೧.೫೦ ಲಕ್ಷ ರೂ.ಗಳನ್ನು ೨೦೨೧ ರಲ್ಲಿ ಪಡೆದಿದ್ದ ಎನ್ನಲಾಗಿದೆ. ಆದರೆ ಹಣ ನೀಡಿ ವರ್ಷ ತುಂಬುತ್ತಾ ಬಂದರೂ ವಿಸಾ ಮತ್ತು ಉದ್ಯೋಗ ಸಿಗದೆ ಇದ್ದಾಗ ಸಂಶಯಗೊಂಡ ಜೇಮ್ಸ್, ವಿಚಾರಿಸಿದರೂ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ಕೈಗೊಂಡ ಪೊಲೀಸರು ಶ್ರೀನಾಥ್ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದರು. ತನಿಖೆ ವೇಳೆ ೪೦ಕ್ಕೂ ಹೆಚ್ಚು ಯುವಕರಿಗೆ ಈತ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ವಂಚನೆಗೊಳಗಾದ ಕೆಲವರು ಪೊಲೀಸ್ ಠಾಣೆಗೆ ಬಂದು ಅಳಲು ತೋಡಿಕೊಂಡಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…