ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ.
ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಬಾಲಂಬಿ ಗ್ರಾಮ, ಎಂ.ಚೆಂಬು ನಿವಾಸಿ ಜೇಮ್ಸ್ ಜೋಸೆಫ್(೨೪) ಎಂಬುವವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ೪ ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಶ್ರೀನಾಥ್, ಮುಂಗಡವಾಗಿ ೧.೫೦ ಲಕ್ಷ ರೂ.ಗಳನ್ನು ೨೦೨೧ ರಲ್ಲಿ ಪಡೆದಿದ್ದ ಎನ್ನಲಾಗಿದೆ. ಆದರೆ ಹಣ ನೀಡಿ ವರ್ಷ ತುಂಬುತ್ತಾ ಬಂದರೂ ವಿಸಾ ಮತ್ತು ಉದ್ಯೋಗ ಸಿಗದೆ ಇದ್ದಾಗ ಸಂಶಯಗೊಂಡ ಜೇಮ್ಸ್, ವಿಚಾರಿಸಿದರೂ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ಕೈಗೊಂಡ ಪೊಲೀಸರು ಶ್ರೀನಾಥ್ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದರು. ತನಿಖೆ ವೇಳೆ ೪೦ಕ್ಕೂ ಹೆಚ್ಚು ಯುವಕರಿಗೆ ಈತ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ವಂಚನೆಗೊಳಗಾದ ಕೆಲವರು ಪೊಲೀಸ್ ಠಾಣೆಗೆ ಬಂದು ಅಳಲು ತೋಡಿಕೊಂಡಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…