ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ.
ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಬಾಲಂಬಿ ಗ್ರಾಮ, ಎಂ.ಚೆಂಬು ನಿವಾಸಿ ಜೇಮ್ಸ್ ಜೋಸೆಫ್(೨೪) ಎಂಬುವವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ೪ ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಶ್ರೀನಾಥ್, ಮುಂಗಡವಾಗಿ ೧.೫೦ ಲಕ್ಷ ರೂ.ಗಳನ್ನು ೨೦೨೧ ರಲ್ಲಿ ಪಡೆದಿದ್ದ ಎನ್ನಲಾಗಿದೆ. ಆದರೆ ಹಣ ನೀಡಿ ವರ್ಷ ತುಂಬುತ್ತಾ ಬಂದರೂ ವಿಸಾ ಮತ್ತು ಉದ್ಯೋಗ ಸಿಗದೆ ಇದ್ದಾಗ ಸಂಶಯಗೊಂಡ ಜೇಮ್ಸ್, ವಿಚಾರಿಸಿದರೂ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ಕೈಗೊಂಡ ಪೊಲೀಸರು ಶ್ರೀನಾಥ್ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದರು. ತನಿಖೆ ವೇಳೆ ೪೦ಕ್ಕೂ ಹೆಚ್ಚು ಯುವಕರಿಗೆ ಈತ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ವಂಚನೆಗೊಳಗಾದ ಕೆಲವರು ಪೊಲೀಸ್ ಠಾಣೆಗೆ ಬಂದು ಅಳಲು ತೋಡಿಕೊಂಡಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…