ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜಸ್ಟಿಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸಿನಂತೆ ಸರ್ಕಾರ ಎಸ್ಸಿ ಸಮುದಾಯಕ್ಕೆ 15 ರಿಂದ 17 ಹಾಗೂ ಎಸ್ ಟಿ ಸಮುದಾಯಕ್ಕೆ ಶೇಕಡಾ 3ರಿಂದ 7.5ರ ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡಿದೆ.
ಸರಕಾರ ಅಂಕಿ ಅಂಶಗಳ ಪ್ರಕಾರ ಪ್ರಸ್ತುತ ರಾಜ್ಯದಲ್ಲಿ 50 ಸಮುದಾಯಗಳ 42 ಲಕ್ಷ ಜನಸಂಖ್ಯೆ ಪರಿಶಿಷ್ಟ ವರ್ಗಗಳ ಅಡಿಯಲ್ಲಿ ಗುರುತಿಸಿದ್ದು ಇದುವರೆವಿಗೂ 60 ವರ್ಷಗಳ ಹಿಂದೆ ಪಟ್ಟಿಯಲ್ಲಿ ದ್ದ ಸೀಮಿತ ಸಮುದಾಯಗಳಿಗೆ ನಿಗದಿಯಾಗಿದ್ದ ಶೇ,3 ರಷ್ಟು ಮೀಸಲಾತಿಯ ನ್ನೇ ಹಂಚಿಕೆ ಮಾಡಿಕೊಳ್ಳುತ್ತಿದ್ದವು.
ಇದರಿಂದ ಅರಣ್ಯ ಆಧಾರಿತ 10 ರಿಂದ 12 ಸಮುದಾಯಗಳ 8 ರಿಂದ 12 ಲಕ್ಷ ಜನಸಂಖ್ಯೆ ಆದಿವಾಸಿಗಳು S T ಪಟ್ಟಿಯಲ್ಲಿರುವ ಇತರ ಸಮುದಾಯಗಳ ಜೊತೆ ಶಿಕ್ಷಣ, ಉದ್ಯೋಗ,ಆರೋಗ್ಯ,ಅಭಿವೃದ್ದಿ ಯೋಜನೆ ಗಳ ಪ್ರಯೋಜನ ಪಡೆಯಲು ದಿನನಿತ್ಯ ನಿರಂತರ ಸೆಣಸಾಟ ನಡೆಸಬೇಕಾದ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ.
ಸರಕಾರ ಮೀಸಲಾತಿ ಹೆಚ್ಚಳ ಮಾಡಲು ನಾಗಮೋಹ ನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿದ ನಂತರ ಆಯೋಗವು ನಡೆಸಿದ ರಾಜ್ಯ,ವಿಭಾಗ ಮಟ್ಟದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಮ್ಮ ಆದಿವಾಸಿ ವೇದಿಕೆ ವತಿಯಿಂದ ಅರಣ್ಯ ಆಧಾರಿತ ಸಮುದಾಯಗಳಿಗೆ ಈ ಹಿಂದೆ ನಿಗದಿಯಾಗಿದ್ದ ಶೇ 3 ರ ಮೀಸಲಾತಿಯನ್ನು ಎಂದಿನಂತೆ ಮುಂದುವರಿಸಬೇಕು ಜೊತೆಗೆ ಅರಣ್ಯ ಆಧಾರಿತ ಆದಿವಾಸಿ ಸಮುದಾಯಗಳಿಗೆ ಪ್ರತ್ಯೇಕ ಒಳ ಮೀಸಲು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ .
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…