ಜಿಲ್ಲೆಗಳು

ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಿ : ಕಾರ್ಯದರ್ಶಿ ಮುತ್ತಯ್ಯ ಒತ್ತಾಯ

ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಸ್ಟಿಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸಿನಂತೆ ಸರ್ಕಾರ ಎಸ್ಸಿ ಸಮುದಾಯಕ್ಕೆ 15 ರಿಂದ 17 ಹಾಗೂ ಎಸ್ ಟಿ ಸಮುದಾಯಕ್ಕೆ ಶೇಕಡಾ 3ರಿಂದ 7.5ರ ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡಿದೆ.

ಸರಕಾರ ಅಂಕಿ ಅಂಶಗಳ ಪ್ರಕಾರ ಪ್ರಸ್ತುತ ರಾಜ್ಯದಲ್ಲಿ 50 ಸಮುದಾಯಗಳ 42 ಲಕ್ಷ ಜನಸಂಖ್ಯೆ ಪರಿಶಿಷ್ಟ ವರ್ಗಗಳ ಅಡಿಯಲ್ಲಿ ಗುರುತಿಸಿದ್ದು ಇದುವರೆವಿಗೂ 60 ವರ್ಷಗಳ ಹಿಂದೆ ಪಟ್ಟಿಯಲ್ಲಿ ದ್ದ ಸೀಮಿತ ಸಮುದಾಯಗಳಿಗೆ ನಿಗದಿಯಾಗಿದ್ದ ಶೇ,3 ರಷ್ಟು ಮೀಸಲಾತಿಯ ನ್ನೇ ಹಂಚಿಕೆ ಮಾಡಿಕೊಳ್ಳುತ್ತಿದ್ದವು.
ಇದರಿಂದ ಅರಣ್ಯ ಆಧಾರಿತ 10 ರಿಂದ 12 ಸಮುದಾಯಗಳ 8 ರಿಂದ 12 ಲಕ್ಷ ಜನಸಂಖ್ಯೆ ಆದಿವಾಸಿಗಳು S T ಪಟ್ಟಿಯಲ್ಲಿರುವ ಇತರ ಸಮುದಾಯಗಳ ಜೊತೆ ಶಿಕ್ಷಣ, ಉದ್ಯೋಗ,ಆರೋಗ್ಯ,ಅಭಿವೃದ್ದಿ ಯೋಜನೆ ಗಳ ಪ್ರಯೋಜನ ಪಡೆಯಲು ದಿನನಿತ್ಯ ನಿರಂತರ ಸೆಣಸಾಟ ನಡೆಸಬೇಕಾದ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ.

ಸರಕಾರ ಮೀಸಲಾತಿ ಹೆಚ್ಚಳ ಮಾಡಲು ನಾಗಮೋಹ ನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿದ ನಂತರ ಆಯೋಗವು ನಡೆಸಿದ ರಾಜ್ಯ,ವಿಭಾಗ ಮಟ್ಟದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಮ್ಮ ಆದಿವಾಸಿ ವೇದಿಕೆ ವತಿಯಿಂದ ಅರಣ್ಯ ಆಧಾರಿತ ಸಮುದಾಯಗಳಿಗೆ ಈ ಹಿಂದೆ ನಿಗದಿಯಾಗಿದ್ದ ಶೇ 3 ರ ಮೀಸಲಾತಿಯನ್ನು ಎಂದಿನಂತೆ ಮುಂದುವರಿಸಬೇಕು ಜೊತೆಗೆ ಅರಣ್ಯ ಆಧಾರಿತ ಆದಿವಾಸಿ ಸಮುದಾಯಗಳಿಗೆ ಪ್ರತ್ಯೇಕ ಒಳ ಮೀಸಲು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ .

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

8 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

9 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

10 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

11 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

11 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

11 hours ago