ಜಿಲ್ಲೆಗಳು

ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಿ : ಕಾರ್ಯದರ್ಶಿ ಮುತ್ತಯ್ಯ ಒತ್ತಾಯ

ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಸ್ಟಿಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸಿನಂತೆ ಸರ್ಕಾರ ಎಸ್ಸಿ ಸಮುದಾಯಕ್ಕೆ 15 ರಿಂದ 17 ಹಾಗೂ ಎಸ್ ಟಿ ಸಮುದಾಯಕ್ಕೆ ಶೇಕಡಾ 3ರಿಂದ 7.5ರ ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡಿದೆ.

ಸರಕಾರ ಅಂಕಿ ಅಂಶಗಳ ಪ್ರಕಾರ ಪ್ರಸ್ತುತ ರಾಜ್ಯದಲ್ಲಿ 50 ಸಮುದಾಯಗಳ 42 ಲಕ್ಷ ಜನಸಂಖ್ಯೆ ಪರಿಶಿಷ್ಟ ವರ್ಗಗಳ ಅಡಿಯಲ್ಲಿ ಗುರುತಿಸಿದ್ದು ಇದುವರೆವಿಗೂ 60 ವರ್ಷಗಳ ಹಿಂದೆ ಪಟ್ಟಿಯಲ್ಲಿ ದ್ದ ಸೀಮಿತ ಸಮುದಾಯಗಳಿಗೆ ನಿಗದಿಯಾಗಿದ್ದ ಶೇ,3 ರಷ್ಟು ಮೀಸಲಾತಿಯ ನ್ನೇ ಹಂಚಿಕೆ ಮಾಡಿಕೊಳ್ಳುತ್ತಿದ್ದವು.
ಇದರಿಂದ ಅರಣ್ಯ ಆಧಾರಿತ 10 ರಿಂದ 12 ಸಮುದಾಯಗಳ 8 ರಿಂದ 12 ಲಕ್ಷ ಜನಸಂಖ್ಯೆ ಆದಿವಾಸಿಗಳು S T ಪಟ್ಟಿಯಲ್ಲಿರುವ ಇತರ ಸಮುದಾಯಗಳ ಜೊತೆ ಶಿಕ್ಷಣ, ಉದ್ಯೋಗ,ಆರೋಗ್ಯ,ಅಭಿವೃದ್ದಿ ಯೋಜನೆ ಗಳ ಪ್ರಯೋಜನ ಪಡೆಯಲು ದಿನನಿತ್ಯ ನಿರಂತರ ಸೆಣಸಾಟ ನಡೆಸಬೇಕಾದ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ.

ಸರಕಾರ ಮೀಸಲಾತಿ ಹೆಚ್ಚಳ ಮಾಡಲು ನಾಗಮೋಹ ನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿದ ನಂತರ ಆಯೋಗವು ನಡೆಸಿದ ರಾಜ್ಯ,ವಿಭಾಗ ಮಟ್ಟದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಮ್ಮ ಆದಿವಾಸಿ ವೇದಿಕೆ ವತಿಯಿಂದ ಅರಣ್ಯ ಆಧಾರಿತ ಸಮುದಾಯಗಳಿಗೆ ಈ ಹಿಂದೆ ನಿಗದಿಯಾಗಿದ್ದ ಶೇ 3 ರ ಮೀಸಲಾತಿಯನ್ನು ಎಂದಿನಂತೆ ಮುಂದುವರಿಸಬೇಕು ಜೊತೆಗೆ ಅರಣ್ಯ ಆಧಾರಿತ ಆದಿವಾಸಿ ಸಮುದಾಯಗಳಿಗೆ ಪ್ರತ್ಯೇಕ ಒಳ ಮೀಸಲು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ .

andolanait

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

5 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

5 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

5 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

5 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

5 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

5 hours ago