ಜಿಲ್ಲೆಗಳು

ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಿ : ಕಾರ್ಯದರ್ಶಿ ಮುತ್ತಯ್ಯ ಒತ್ತಾಯ

ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಸ್ಟಿಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸಿನಂತೆ ಸರ್ಕಾರ ಎಸ್ಸಿ ಸಮುದಾಯಕ್ಕೆ 15 ರಿಂದ 17 ಹಾಗೂ ಎಸ್ ಟಿ ಸಮುದಾಯಕ್ಕೆ ಶೇಕಡಾ 3ರಿಂದ 7.5ರ ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡಿದೆ.

ಸರಕಾರ ಅಂಕಿ ಅಂಶಗಳ ಪ್ರಕಾರ ಪ್ರಸ್ತುತ ರಾಜ್ಯದಲ್ಲಿ 50 ಸಮುದಾಯಗಳ 42 ಲಕ್ಷ ಜನಸಂಖ್ಯೆ ಪರಿಶಿಷ್ಟ ವರ್ಗಗಳ ಅಡಿಯಲ್ಲಿ ಗುರುತಿಸಿದ್ದು ಇದುವರೆವಿಗೂ 60 ವರ್ಷಗಳ ಹಿಂದೆ ಪಟ್ಟಿಯಲ್ಲಿ ದ್ದ ಸೀಮಿತ ಸಮುದಾಯಗಳಿಗೆ ನಿಗದಿಯಾಗಿದ್ದ ಶೇ,3 ರಷ್ಟು ಮೀಸಲಾತಿಯ ನ್ನೇ ಹಂಚಿಕೆ ಮಾಡಿಕೊಳ್ಳುತ್ತಿದ್ದವು.
ಇದರಿಂದ ಅರಣ್ಯ ಆಧಾರಿತ 10 ರಿಂದ 12 ಸಮುದಾಯಗಳ 8 ರಿಂದ 12 ಲಕ್ಷ ಜನಸಂಖ್ಯೆ ಆದಿವಾಸಿಗಳು S T ಪಟ್ಟಿಯಲ್ಲಿರುವ ಇತರ ಸಮುದಾಯಗಳ ಜೊತೆ ಶಿಕ್ಷಣ, ಉದ್ಯೋಗ,ಆರೋಗ್ಯ,ಅಭಿವೃದ್ದಿ ಯೋಜನೆ ಗಳ ಪ್ರಯೋಜನ ಪಡೆಯಲು ದಿನನಿತ್ಯ ನಿರಂತರ ಸೆಣಸಾಟ ನಡೆಸಬೇಕಾದ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ.

ಸರಕಾರ ಮೀಸಲಾತಿ ಹೆಚ್ಚಳ ಮಾಡಲು ನಾಗಮೋಹ ನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿದ ನಂತರ ಆಯೋಗವು ನಡೆಸಿದ ರಾಜ್ಯ,ವಿಭಾಗ ಮಟ್ಟದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಮ್ಮ ಆದಿವಾಸಿ ವೇದಿಕೆ ವತಿಯಿಂದ ಅರಣ್ಯ ಆಧಾರಿತ ಸಮುದಾಯಗಳಿಗೆ ಈ ಹಿಂದೆ ನಿಗದಿಯಾಗಿದ್ದ ಶೇ 3 ರ ಮೀಸಲಾತಿಯನ್ನು ಎಂದಿನಂತೆ ಮುಂದುವರಿಸಬೇಕು ಜೊತೆಗೆ ಅರಣ್ಯ ಆಧಾರಿತ ಆದಿವಾಸಿ ಸಮುದಾಯಗಳಿಗೆ ಪ್ರತ್ಯೇಕ ಒಳ ಮೀಸಲು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ .

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago