ಜಿಲ್ಲೆಗಳು

ಮೈಸೂರು : ಚಿರತೆ ಕಾರ್ಯಾಚರಣೆಯ ಕಾರ್ಯತಂತ್ರ ಬದಲಾಯಿಸಿದ ಅರಣ್ಯ ಇಲಾಖೆ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ  ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಅವರು ಬುಧವಾರ ಮಧ್ಯಾಹ್ನ ಕಾರ್ಯಾಚರಣೆಗಾಗಿ ಉತ್ತಮ ಗುಣಮಟ್ಟದ ಥರ್ಮಲ್ ಕ್ಯಾಮೆರಾ ಮತ್ತು ಡ್ರೋನ್‌ನೊಂದಿಗೆ ಕಾರ್ಯಾಚರಣೆ ಸ್ಥಳಕ್ಕೆ ಆಗಮಿಸಿದರು. ಹೊಸ ಡ್ರೋನ್​ನೊಂದಿಗೆ ವಿಶೇಷ ತಂಡಗಳು ಸೋಮವಾರ ಬೆಳಿಗ್ಗೆ ಚಿರತೆ ಒಂದು ಬಾರಿ ಶನಿವಾರ ರಾತ್ರಿ ಒಂದು ಬಾರಿ ಕಾಣಿಸಿಕೊಂಡಿದ್ದು, ಚಿರತೆ ಮಲ ಸಹ ಕಂಡುಬಂದಿದೆ. ಹೀಗಾಗಿ ಒಟ್ಟು ಎರಡು ಬಾರಿ ಚಿರತೆ ಕಾಣಿಸಿಕೊಂಡ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಸುತ್ತಲೂ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಿರ್ಧರಿಸಿವೆ ಎಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಈ ರೀತಿಯ ಕ್ಯಾಮೆರಾವನ್ನು ಪ್ರಾಯೋಗಿಕವಾಗಿ ಬಳಸುತ್ತಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಇರುವ ಇತರೆ ಪ್ರದೇಶಗಳಲ್ಲಿ ಸಂಘರ್ಷ ನಿಭಾಯಿಸಲು ಬಳಸಲಾಗುತ್ತದೆ ಎಂದು ಕುಮಾರ್ ಪುಷ್ಕರ್ ಅವರು ಡೆಕ್ಕನ್​ ಹೆರಾಲ್ಡ್​ಗೆ ಮಾಹಿತಿ ನೀಡಿದ್ದಾರೆ.

“ನಾವು ಈಗಾಗಲೇ ಹೊಂದಿರುವ ಸಾಮಾನ್ಯ ಕ್ಯಾಮೆರಾ ಒಳಗೊಂಡ ಡ್ರೋನ್​ಗಳು ಬೆಳಕಿನ ಸಂಕೇತಗಳನ್ನು ಸ್ವೀಕರಿಸಿ ಅದರ ಆಧಾರದ ಮೇಲೆ ಅದು ಚಿತ್ರಗಳನ್ನು ರಚಿಸುತ್ತದೆ. ಆದರೆ ಥರ್ಮಲ್ ಕ್ಯಾಮೆರಾದ ವಿಷಯದಲ್ಲಿ ಅದು ಜೀವಂತ ವಸ್ತುವಿನ ಚಲನೆ ಇದ್ದಾಗಲೆಲ್ಲಾ ಅದು ಪ್ರಾಣಿಯಾಗಿರಲಿ ಅಥವಾ ಮನುಷ್ಯನಾಗಿರಲಿ, ತಾಪಮಾನದಲ್ಲಿನ ವ್ಯತ್ಯಾಸವನ್ನು ಗುರುತಿಸುತ್ತದೆ. ಅದರ ಆಧಾರದ ಮೇಲೆ ಕ್ಯಾಮೆರಾಗಳು ಅವುಗಳ ಆಕಾರವನ್ನು ಸರಿಯಾಗಿ ತೆಗೆದುಕೊಳ್ಳುತ್ತದೆ. ಇದನ್ನು ಪೊಲೀಸರು ಮತ್ತು ರಕ್ಷಣಾ ಪಡೆಗಳು ಕಣ್ಗಾವಲು ಉದ್ದೇಶಗಳಿಗಾಗಿ ಬಳಸುತ್ತವೆ. ಚಿರತೆ ಪತ್ತೆಗೆ ಇದೇ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಯೋಚಿಸಿದ್ದೇವೆ. ಇದು ಪರಿಣಾಮಕಾರಿಯಾದರೆ ಮಾನವ-ಪ್ರಾಣಿ ಸಂಘರ್ಷವನ್ನು ನಿಭಾಯಿಸಲು ನಾವು ಅದನ್ನು ಬಳಸಬಹುದು. ಶುಕ್ರವಾರದವರೆಗೆ ಇದನ್ನು ಇಲ್ಲಿ ಬಳಸಲಾಗುತ್ತದೆ” ಎಂದರು.

andolana

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

34 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

3 hours ago