ಜಿಲ್ಲೆಗಳು

ಮೈಸೂರು : ಚಿರತೆ ಕಾರ್ಯಾಚರಣೆಯ ಕಾರ್ಯತಂತ್ರ ಬದಲಾಯಿಸಿದ ಅರಣ್ಯ ಇಲಾಖೆ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ  ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಅವರು ಬುಧವಾರ ಮಧ್ಯಾಹ್ನ ಕಾರ್ಯಾಚರಣೆಗಾಗಿ ಉತ್ತಮ ಗುಣಮಟ್ಟದ ಥರ್ಮಲ್ ಕ್ಯಾಮೆರಾ ಮತ್ತು ಡ್ರೋನ್‌ನೊಂದಿಗೆ ಕಾರ್ಯಾಚರಣೆ ಸ್ಥಳಕ್ಕೆ ಆಗಮಿಸಿದರು. ಹೊಸ ಡ್ರೋನ್​ನೊಂದಿಗೆ ವಿಶೇಷ ತಂಡಗಳು ಸೋಮವಾರ ಬೆಳಿಗ್ಗೆ ಚಿರತೆ ಒಂದು ಬಾರಿ ಶನಿವಾರ ರಾತ್ರಿ ಒಂದು ಬಾರಿ ಕಾಣಿಸಿಕೊಂಡಿದ್ದು, ಚಿರತೆ ಮಲ ಸಹ ಕಂಡುಬಂದಿದೆ. ಹೀಗಾಗಿ ಒಟ್ಟು ಎರಡು ಬಾರಿ ಚಿರತೆ ಕಾಣಿಸಿಕೊಂಡ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಸುತ್ತಲೂ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಿರ್ಧರಿಸಿವೆ ಎಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಈ ರೀತಿಯ ಕ್ಯಾಮೆರಾವನ್ನು ಪ್ರಾಯೋಗಿಕವಾಗಿ ಬಳಸುತ್ತಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಇರುವ ಇತರೆ ಪ್ರದೇಶಗಳಲ್ಲಿ ಸಂಘರ್ಷ ನಿಭಾಯಿಸಲು ಬಳಸಲಾಗುತ್ತದೆ ಎಂದು ಕುಮಾರ್ ಪುಷ್ಕರ್ ಅವರು ಡೆಕ್ಕನ್​ ಹೆರಾಲ್ಡ್​ಗೆ ಮಾಹಿತಿ ನೀಡಿದ್ದಾರೆ.

“ನಾವು ಈಗಾಗಲೇ ಹೊಂದಿರುವ ಸಾಮಾನ್ಯ ಕ್ಯಾಮೆರಾ ಒಳಗೊಂಡ ಡ್ರೋನ್​ಗಳು ಬೆಳಕಿನ ಸಂಕೇತಗಳನ್ನು ಸ್ವೀಕರಿಸಿ ಅದರ ಆಧಾರದ ಮೇಲೆ ಅದು ಚಿತ್ರಗಳನ್ನು ರಚಿಸುತ್ತದೆ. ಆದರೆ ಥರ್ಮಲ್ ಕ್ಯಾಮೆರಾದ ವಿಷಯದಲ್ಲಿ ಅದು ಜೀವಂತ ವಸ್ತುವಿನ ಚಲನೆ ಇದ್ದಾಗಲೆಲ್ಲಾ ಅದು ಪ್ರಾಣಿಯಾಗಿರಲಿ ಅಥವಾ ಮನುಷ್ಯನಾಗಿರಲಿ, ತಾಪಮಾನದಲ್ಲಿನ ವ್ಯತ್ಯಾಸವನ್ನು ಗುರುತಿಸುತ್ತದೆ. ಅದರ ಆಧಾರದ ಮೇಲೆ ಕ್ಯಾಮೆರಾಗಳು ಅವುಗಳ ಆಕಾರವನ್ನು ಸರಿಯಾಗಿ ತೆಗೆದುಕೊಳ್ಳುತ್ತದೆ. ಇದನ್ನು ಪೊಲೀಸರು ಮತ್ತು ರಕ್ಷಣಾ ಪಡೆಗಳು ಕಣ್ಗಾವಲು ಉದ್ದೇಶಗಳಿಗಾಗಿ ಬಳಸುತ್ತವೆ. ಚಿರತೆ ಪತ್ತೆಗೆ ಇದೇ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಯೋಚಿಸಿದ್ದೇವೆ. ಇದು ಪರಿಣಾಮಕಾರಿಯಾದರೆ ಮಾನವ-ಪ್ರಾಣಿ ಸಂಘರ್ಷವನ್ನು ನಿಭಾಯಿಸಲು ನಾವು ಅದನ್ನು ಬಳಸಬಹುದು. ಶುಕ್ರವಾರದವರೆಗೆ ಇದನ್ನು ಇಲ್ಲಿ ಬಳಸಲಾಗುತ್ತದೆ” ಎಂದರು.

andolana

Recent Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

9 mins ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

33 mins ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

58 mins ago

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

1 hour ago

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…

3 hours ago

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

3 hours ago