ಜಿಲ್ಲೆಗಳು

ಮೈಸೂರು : ಚಿರತೆ ಕಾರ್ಯಾಚರಣೆಯ ಕಾರ್ಯತಂತ್ರ ಬದಲಾಯಿಸಿದ ಅರಣ್ಯ ಇಲಾಖೆ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ  ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಅವರು ಬುಧವಾರ ಮಧ್ಯಾಹ್ನ ಕಾರ್ಯಾಚರಣೆಗಾಗಿ ಉತ್ತಮ ಗುಣಮಟ್ಟದ ಥರ್ಮಲ್ ಕ್ಯಾಮೆರಾ ಮತ್ತು ಡ್ರೋನ್‌ನೊಂದಿಗೆ ಕಾರ್ಯಾಚರಣೆ ಸ್ಥಳಕ್ಕೆ ಆಗಮಿಸಿದರು. ಹೊಸ ಡ್ರೋನ್​ನೊಂದಿಗೆ ವಿಶೇಷ ತಂಡಗಳು ಸೋಮವಾರ ಬೆಳಿಗ್ಗೆ ಚಿರತೆ ಒಂದು ಬಾರಿ ಶನಿವಾರ ರಾತ್ರಿ ಒಂದು ಬಾರಿ ಕಾಣಿಸಿಕೊಂಡಿದ್ದು, ಚಿರತೆ ಮಲ ಸಹ ಕಂಡುಬಂದಿದೆ. ಹೀಗಾಗಿ ಒಟ್ಟು ಎರಡು ಬಾರಿ ಚಿರತೆ ಕಾಣಿಸಿಕೊಂಡ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಸುತ್ತಲೂ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಿರ್ಧರಿಸಿವೆ ಎಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಈ ರೀತಿಯ ಕ್ಯಾಮೆರಾವನ್ನು ಪ್ರಾಯೋಗಿಕವಾಗಿ ಬಳಸುತ್ತಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಇರುವ ಇತರೆ ಪ್ರದೇಶಗಳಲ್ಲಿ ಸಂಘರ್ಷ ನಿಭಾಯಿಸಲು ಬಳಸಲಾಗುತ್ತದೆ ಎಂದು ಕುಮಾರ್ ಪುಷ್ಕರ್ ಅವರು ಡೆಕ್ಕನ್​ ಹೆರಾಲ್ಡ್​ಗೆ ಮಾಹಿತಿ ನೀಡಿದ್ದಾರೆ.

“ನಾವು ಈಗಾಗಲೇ ಹೊಂದಿರುವ ಸಾಮಾನ್ಯ ಕ್ಯಾಮೆರಾ ಒಳಗೊಂಡ ಡ್ರೋನ್​ಗಳು ಬೆಳಕಿನ ಸಂಕೇತಗಳನ್ನು ಸ್ವೀಕರಿಸಿ ಅದರ ಆಧಾರದ ಮೇಲೆ ಅದು ಚಿತ್ರಗಳನ್ನು ರಚಿಸುತ್ತದೆ. ಆದರೆ ಥರ್ಮಲ್ ಕ್ಯಾಮೆರಾದ ವಿಷಯದಲ್ಲಿ ಅದು ಜೀವಂತ ವಸ್ತುವಿನ ಚಲನೆ ಇದ್ದಾಗಲೆಲ್ಲಾ ಅದು ಪ್ರಾಣಿಯಾಗಿರಲಿ ಅಥವಾ ಮನುಷ್ಯನಾಗಿರಲಿ, ತಾಪಮಾನದಲ್ಲಿನ ವ್ಯತ್ಯಾಸವನ್ನು ಗುರುತಿಸುತ್ತದೆ. ಅದರ ಆಧಾರದ ಮೇಲೆ ಕ್ಯಾಮೆರಾಗಳು ಅವುಗಳ ಆಕಾರವನ್ನು ಸರಿಯಾಗಿ ತೆಗೆದುಕೊಳ್ಳುತ್ತದೆ. ಇದನ್ನು ಪೊಲೀಸರು ಮತ್ತು ರಕ್ಷಣಾ ಪಡೆಗಳು ಕಣ್ಗಾವಲು ಉದ್ದೇಶಗಳಿಗಾಗಿ ಬಳಸುತ್ತವೆ. ಚಿರತೆ ಪತ್ತೆಗೆ ಇದೇ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಯೋಚಿಸಿದ್ದೇವೆ. ಇದು ಪರಿಣಾಮಕಾರಿಯಾದರೆ ಮಾನವ-ಪ್ರಾಣಿ ಸಂಘರ್ಷವನ್ನು ನಿಭಾಯಿಸಲು ನಾವು ಅದನ್ನು ಬಳಸಬಹುದು. ಶುಕ್ರವಾರದವರೆಗೆ ಇದನ್ನು ಇಲ್ಲಿ ಬಳಸಲಾಗುತ್ತದೆ” ಎಂದರು.

andolana

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago