ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ.
ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ್(45) ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಘಟನೆಯ ವಿವರ : ಬೈಲೂರು ಅರಣ್ಯ ಪ್ರದೇಶ ಸಮೀಪದ ಜಮೀನಿನಲ್ಲಿದ್ದ ಕಣ್ಣು ಕಾಣದ ವ್ಯಕ್ತಿಯೋರ್ವನ ಮೇಲೆ ಭಾನುವಾರ ಮಧ್ಯಾಹ್ನ 3:00 ಸಮಯದಲ್ಲಿ ದಾಳಿ ಮಾಡಿದೆ, ಪರಿಣಾಮ ವ್ಯಕ್ತಿಯ ಕೈ ಹಾಗೂ ಕಾಲು ಮುರಿದಿದೆ. ಜಮೀನಿನಲ್ಲಿ ಘಟನೆ ನಡೆದಿದ್ದರಿಂದ ವಿಚಾರ ಮನೆಯವರಿಗೆ ತಿಳಿದಿಲ್ಲ ನಂತರ ಮೇವು ಮೆಯಿಸಲು ತೆರಳಿದ ದನಗಾಯಿ ಯುವಕರಿಂದ ಮಾಹಿತಿ ಪಡೆದುಕೊಂಡ ಕುಟುಂಬಸ್ಥರು ಗ್ರಾಮ ಪಂಚಾಯಿತಿ ಸದಸ್ಯ ನಿಂಗಯ್ಯ ಹಾಗೂ ಅರಣ್ಯ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಸಹಕಾರದಿಂದ ಅರಣ್ಯ ಇಲಾಖೆಯ ವಾಹನದ ಮೂಲಕ ಪಿಜಿ ಪಾಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದ ಹಿನ್ನೆಲೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ದಾಖಲು ಮಾಡಿದ್ದಾರೆ.
ಸಾರ್ವಜನಿಕರಿಂದ ಆಕ್ರೋಶ : ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ವಾಹನವಿದ್ದರೂ ಸಹ ಖಾಯಂ ಚಾಲಕನನ್ನು ನೇಮಕ ಮಾಡದೆ ಇರುವ ಪರಿಣಾಮ ಪದೇ ಪದೇ ರೋಗಿಗಳು ತೊಂದರೆ ಅನುಭವಿಸಬೇಕಾಗಿದೆ. ಗಾಯಗೊಂಡಿದ್ದ ವ್ಯಕ್ತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಸಹ ಚಾಲಕನಿಲ್ಲದೆ ತೊಂದರೆಗೊಳಗಾಗಿ ಪ್ರತಿಭಟನೆ ನಡೆಸಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ, ಖಾಯಂಚಾಲಕನನ್ನು ನೇಮಕ ಮಾಡದಿದ್ದರೆ ಗ್ರಾಮಸ್ಥರು ಹಾಗೂ ಪ್ರಜ್ಞಾವಂತ ನಾಗರಿಕರೆಲ್ಲರೂ ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಅರಣ್ಯ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಸಮಯಕ್ಕೆ ಸರಿಯಾಗಿ ತುರ್ತು ವಾಹನ ಬಾರದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಗಿರೀಶ್ ಮತ್ತು ನವೀನ್ ಅರಣ್ಯ ಇಲಾಖೆ ವಾಹನವನ್ನು ನೀಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…