ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ.
ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ್(45) ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಘಟನೆಯ ವಿವರ : ಬೈಲೂರು ಅರಣ್ಯ ಪ್ರದೇಶ ಸಮೀಪದ ಜಮೀನಿನಲ್ಲಿದ್ದ ಕಣ್ಣು ಕಾಣದ ವ್ಯಕ್ತಿಯೋರ್ವನ ಮೇಲೆ ಭಾನುವಾರ ಮಧ್ಯಾಹ್ನ 3:00 ಸಮಯದಲ್ಲಿ ದಾಳಿ ಮಾಡಿದೆ, ಪರಿಣಾಮ ವ್ಯಕ್ತಿಯ ಕೈ ಹಾಗೂ ಕಾಲು ಮುರಿದಿದೆ. ಜಮೀನಿನಲ್ಲಿ ಘಟನೆ ನಡೆದಿದ್ದರಿಂದ ವಿಚಾರ ಮನೆಯವರಿಗೆ ತಿಳಿದಿಲ್ಲ ನಂತರ ಮೇವು ಮೆಯಿಸಲು ತೆರಳಿದ ದನಗಾಯಿ ಯುವಕರಿಂದ ಮಾಹಿತಿ ಪಡೆದುಕೊಂಡ ಕುಟುಂಬಸ್ಥರು ಗ್ರಾಮ ಪಂಚಾಯಿತಿ ಸದಸ್ಯ ನಿಂಗಯ್ಯ ಹಾಗೂ ಅರಣ್ಯ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಸಹಕಾರದಿಂದ ಅರಣ್ಯ ಇಲಾಖೆಯ ವಾಹನದ ಮೂಲಕ ಪಿಜಿ ಪಾಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದ ಹಿನ್ನೆಲೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ದಾಖಲು ಮಾಡಿದ್ದಾರೆ.
ಸಾರ್ವಜನಿಕರಿಂದ ಆಕ್ರೋಶ : ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ವಾಹನವಿದ್ದರೂ ಸಹ ಖಾಯಂ ಚಾಲಕನನ್ನು ನೇಮಕ ಮಾಡದೆ ಇರುವ ಪರಿಣಾಮ ಪದೇ ಪದೇ ರೋಗಿಗಳು ತೊಂದರೆ ಅನುಭವಿಸಬೇಕಾಗಿದೆ. ಗಾಯಗೊಂಡಿದ್ದ ವ್ಯಕ್ತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಸಹ ಚಾಲಕನಿಲ್ಲದೆ ತೊಂದರೆಗೊಳಗಾಗಿ ಪ್ರತಿಭಟನೆ ನಡೆಸಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ, ಖಾಯಂಚಾಲಕನನ್ನು ನೇಮಕ ಮಾಡದಿದ್ದರೆ ಗ್ರಾಮಸ್ಥರು ಹಾಗೂ ಪ್ರಜ್ಞಾವಂತ ನಾಗರಿಕರೆಲ್ಲರೂ ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಅರಣ್ಯ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಸಮಯಕ್ಕೆ ಸರಿಯಾಗಿ ತುರ್ತು ವಾಹನ ಬಾರದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಗಿರೀಶ್ ಮತ್ತು ನವೀನ್ ಅರಣ್ಯ ಇಲಾಖೆ ವಾಹನವನ್ನು ನೀಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…