Mysore
26
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಕಾಡಾನೆ ದಾಳಿ ವ್ಯಕ್ತಿಯೋರ್ವನಿಗೆ ತೀವ್ರ ಗಾಯ ಆಸ್ಪತ್ರೆಗೆ ದಾಖಲು

ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ.

ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.

ಘಟನೆ ವಿವರ: ಕಾರ್ಯನಿಮಿತ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ ಬುಧವಾರ ಸಂಜೆ 7:00 ಸಮಯದಲ್ಲಿ ಕೊಕ್ಕಬರೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆದಿದೆ ಪರಿಣಾಮ ಎರಡು ಕಾಲಿನ ಮೂಳೆ ಮುರಿದಿರುವುದರಿಂದ ತೀವ್ರ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!